UN NETWORKS
ಉಳ್ಳಾಲ: ಸಿಡಿಲು ಬಡಿದು ಸೋಮೇಶ್ವರ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಮನೆಗೆ ಅಪಾರ ಹಾನಿಯುಂಟಾಗಿದ್ದು, ಇದೇ ವೇಳೆ ಸಮೀಪದ ಮನೆಗಳಿಗೂ ಹಾನಿಯಾಗಿರುವ ಘಟನೆ ಕುಂಪಲ ಕೃಷ್ಣನಗರದ ಎರಡನೇ ಕ್ರಾಸಿನಲ್ಲಿ ಭಾನುವಾರ ತಡರಾತ್ರಿ ವೇಳೆ ಸಂಭವಿಸಿದೆ.
ಮನೆಯೊಳಗಿದ್ದ ಇಲೆಕ್ಟ್ರಾನಿಕ್ಸ್ ಸಾಮಗ್ರಿಗಳೆಲ್ಲ ಹಾನಿಯಾಗಿದೆ. ಎರಡು ತಿಂಗಳ ಹಿಂದೆಯಷ್ಟೇ ಮನೆಯ ಗೃಹಪ್ರವೇಶವಾಗಿತ್ತು. ಸ್ಥಳಕ್ಕೆ ಸೋಮೇಶ್ವರ ಗ್ರಾ.ಪಂ ಅಧ್ಯಕ್ಷ ರಾಜೇಶ್ ಉಚ್ಚಿಲ್ ಭೇಟಿ ನೀಡಿದರು.