UN NETWORKS
ಮಂಗಳೂರು: ಬಡ ರಿಕ್ಷಾ ಚಾಲಕರನ್ನು ಗುರುತಿಸಿ ಅವರಿಗೆ ಕಿಟ್ ವಿತರಣೆ ಮತ್ತು ಇಫ್ತಾರ್ ಕೂಟ ಏರ್ಪಡಿಸುವುದು ಉತ್ತಮ ಕಾರ್ಯವಾಗಿದೆ. ಇದಕ್ಕೆ ಎಲ್ಲರೂ ಸಹಕಾರ ನೀಡಬೇಕಾದ ಅನಿವಾರ್ಯತೆ ಇದೆ ಎಂದು ಶಾಸಕ ಯು.ಟಿ. ಖಾದರ್ ಹೇಳಿದರು.
ಅವರು ಮಾಸ್ತಿಕಟ್ಟೆ ಅಝಾದ್ನಗರ ರಿಕ್ಷಾಚಾಲಕರ ಸಂಘದ ವತಿಯಿಂದ ಭಾನುವಾರ ಮಾಸ್ತಿಕಟ್ಟೆಯಲ್ಲಿ ನಡೆದ ಇಫ್ತಾರ್ ಕೂಟ ಮತ್ತು ಕಿಟ್ ವಿತರಣಾ ಕಾರ್ಯಕ್ರಮದಲ್ಲಿ ಕಿಟ್ ವಿತರಣೆಯನ್ನು ಉದ್ಘಾಟಿಸಿ ಮಾತನಾಡಿದರು.