UN NETWORKS
ಮಂಗಳೂರು: ನಗರದ ಮಂಗಳಾದೇವಿ ದೇವಸ್ಥಾನ ಎದುರಿನ ಮರದ ಟೊಂಗೆವೊಂದು ಬಿದ್ದು ನಾಲ್ವರಿಗೆ ಗಾಯವಾಗಿರುವ ಘಟನೆ ಶುಕ್ರವಾರ ರಾತ್ರಿ ನಡೆದಿದೆ.
ಎಡೆಬಿಡದೆ ಸುರಿಯುತ್ತಿರುವ ಮಳೆ ಹಾಗೂ ಗಾಳಿಗೆ ದೇವಸ್ಥಾನದ ಎದುರಿನ ಅಶೋಕ ಮರದ ರೆಂಬೆಯೊಂದು ತುಂಡಾಗಿ ಬಿದ್ದಿದ್ದು, ಈ ಸಂದರ್ಭ ಅಲ್ಲಿದ್ದ ನಾಲ್ಕು ಮಂದಿಗೆ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯಲ್ಲಿ ಆ್ಯಕ್ಟಿವಾ ದ್ವಿಚಕ್ರ ವಾಹನವೊಂದಕ್ಕೆ ಹಾನಿಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.