UN NETWORKS
ಮಂಜೇಶ್ವರ : ದೇಶದಾದ್ಯಂತ ಕೋಮುವಾದವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ ಇದು ಅಪಾಯಕಾರಿ ,ವಿವಿಧ ಭಾಷೆಗಳ ಸಂಸ್ಕೃತಿಯ, ಶಾಂತಿ , ಸೌಹಾರ್ಧತೆಯ ತವರೂರು ಮಂಜೇಶ್ವರ , ಮಂಜೇಶ್ವರದ ಜನತೆಯು ಸೌಹಾರ್ಧತೆಯನ್ನು ಕಾಯ್ದುಕೊಂಡು ಬಂದಿದ್ದಾರೆ ಎಂದು ಮಂಜೇಶ್ವರ ಬ್ಲಾಕ್ ಪಂಚಾಯತು ಅಧ್ಯಕ್ಷ ಎ.ಕೆ.ಎಂ ಅಶ್ರಫ್ ಹೇಳಿದ್ದಾರೆ. ಅವರು ಮಂಜೇಶ್ವರ ಪ್ರೆಸ್ ಕ್ಲಬ್ ಹೊಸಂಗಡಿ ಹಿಲ್ ಸೈಡ್ ಸಭಾಂಗಣದಲ್ಲಿ ಆಯೋಜಿಸಿದ್ದ ಇಫ್ತಾರ್ ಸಂಗಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಮಂಜೇಶ್ವರ ಪ್ರೆಸ್ ಕ್ಲಬ್ ಆಯೋಜಿಸಿರುವ ಇಫ್ತಾರ್ ಸಂಗಮದಿಂದ ಮನುಷ್ಯರೊಳಗಿನ ಸೌಹಾರ್ಧತೆ ಇನ್ನಷ್ಟು ಹೆಚ್ಚುವಂತಾಗಲಿ ಎಂದು ಅವರು ಹೇಳಿದರು.
ಈ ಸಂದರ್ಭ ಪತ್ರಕರ್ತರಾದ ಶಶಿಧರ್ ಪೊಯ್ಯತ್ತಬೈಲು , ಆಸಿಫ್ ಉಳ್ಳಾಲ , ಜಗದೀಶ್ ಪ್ರತಾಪ್ ನಗರ , ರವಿ ಪ್ರತಾಪ್ ನಗರ , ರತನ್ ಕುಮಾರ್ ಹೊಸಂಗಡಿ , ಅನೀಸ್ ಉಪ್ಪಳ , ಸನಲ್ ಕುಮಾರ್ , ಸಲಾಂ ವರ್ಕಾಡಿ ಮೊದಲಾದವರು ಉಪಸ್ತಿತರಿದ್ದರು. ಇಫ್ತಾರ್ ಸಂಗಮದಲ್ಲಿ ನೂರಾರು ಮಂದಿ ಪಾಳ್ಗೊಂಡರು.