UN NETWORKS
ಉಳ್ಳಾಲ : ಸಮ್ಮೇಳನ, ವಿಚಾರ ಸಂಕಿರಣಗಳು ದಾದಿಯರಲ್ಲಿರುವ ಕೌಶಲ್ಯ ವೃದ್ಧಿಗೆ ಪೂರಕ ಎಂದು ಯೆನೆಪೋಯ ವಿಶ್ವವಿದ್ಯಾನಿಲಯದ ಕುಲಸಚಿವ ಡಾ| ಜಿ ಶ್ರೀಕುಮಾರ್ ಮೆನನ್ ಅಭಿಪ್ರಾಯಪಟ್ಟರು.
ಆಸ್ಪತ್ರೆಯಲ್ಲಿ ರೋಗಿಗಳ ಆರೈಕೆಯೊಂದಿಗೆ ಆಸ್ಪತ್ರೆಯ ಹೆಚ್ಚಿನ ಕಾರ್ಯದಲ್ಲಿ ದಾದಿಯರ ಪಾತ್ರ ಮಹತ್ವದ್ದಾಗಿದೆ. ದಾದಿಯರು ತಮ್ಮ ವೃತ್ತಿ ಸಂಬಂಧಿಸಿದ ಅನೇಕ ಹೊಸ ವಿಚಾರಗಳತ್ತ ಜ್ಞಾನವನ್ನು ಬೆಳೆಸುವಲ್ಲಿ ಪೂರಕ ಚಟುವಟಿಕೆಗಳಲ್ಲಿ ನಿರತರಾಗಬೇಕು. ಈ ನಿಟ್ಟಿನಲ್ಲಿ ವಿಚಾರ ಸಂಕಿರಣಗಳಿಂದ ತಮ್ಮಲ್ಲಿರುವ ಕೌಶಕ್ಯವನ್ನು ವೃದ್ಧಿಸಲು ಸಹಕಾರಿಯಾಗುತ್ತದೆ ಎಂದರು.
ಯೆನೆಪೋಯ ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲರು ಡಾ| ಲೀನಾ ಕೆ.ಸಿ.ದಿನದ ಮಹತ್ವವನ್ನು ವಿವರಿಸಿದರು. ಸಮ್ಮೇಳನದಲ್ಲಿ ಮಂಗಳೂರಿನ ವಿವಿಧ ಆಸ್ಪತ್ರೆಯ ಸಂಪನ್ಮೂಲ ವ್ಯಕ್ತಿಗಳು ಸಮ್ಮೇಳನವನ್ನು ಉದ್ದೇಶಿಸಿ ಮಾತನಾಡಿದರು.ಯೆನೆಪೋಯ ದಂತ ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲ ಡಾ| ಶ್ರೀಪತಿ ರಾವ್, ಉಪಪ್ರಾಂಶುಪಾಲ ಡಾ| ಶ್ಯಾಮ್ ಭಟ್ ಉಪಸ್ಥಿತರಿದ್ದರು.
ಸಮುದಾಯ ಅರೋಗ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕ ಆನಂದ ಅವರು ಸ್ವಾಗತಿಸಿದರು. ಶಿಶಿಲ್ ಮ್ಯಾಥ್ಯು ವಂದಿಸಿದರು. ಸಮ್ಮೇಳನದಲ್ಲಿ 270 ಮಂದಿ ಕರ್ನಾಟಕ ಮತ್ತು ಕೇರಳದ ಹಲವು ನರ್ಸಿಂಗ್ ಕಾಲೇಜು ಮತ್ತು ಆಸ್ಪತ್ರೆಗಳಿಂದ ಭಾಗವಹಿಸಿದರು.