UN NETWORKS
ಹರೇಕಳ : ಶ್ರೀ ರಾಮಕೃಷ್ಣ ಅನುದಾನಿತ ಪ್ರೌಢಶಾಲೆ, ಹರೇಕಳ ಸಭಾಂಗಣದಲ್ಲಿ ಪೋಷಕರ ಸಭೆಯು ನಡೆಯಿತು. ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದ ತಾಲೂಕು ಸಮನ್ವಯ ಅಧಿಕಾರಿ, ಕ್ಷೇತ್ರ ಶಿಕ್ಷಣಾಧಿಕಾರಿ ಕಛೇರಿಯ ವಲಯ ಸಂಪನ್ಮೂಲ ಅಧಿಕಾರಿಗಳಾದ ಗೀತಾ ಶ್ಯಾನುಭೋಗ್ರವರು ಮಾತನಾಡುತ್ತಾ ಇಂದು ವಿದ್ಯಾರ್ಥಿಗಳ ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಗಳಲ್ಲಿ ಮತ್ತು ವ್ಯಕ್ತಿತ್ವ ವಿಕಸನಕ್ಕೆ ಸಂಬಂಧಿಸಿ ಶಿಕ್ಷಕರ ಪಾತ್ರದಷ್ಟೇ ಪೋಷಕರ ಪಾತ್ರ ಕೂಡ ಪ್ರಾಮುಖ್ಯವಾಗಿರುತ್ತದೆ ಎಂದರು.
ಇದೇ ಸಂದರ್ಭದಲ್ಲಿ ಶಾಲಾ ಶಿಕ್ಷಕ ರಕ್ಷಕ ಸಂಘಕ್ಕೆ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಶೈಕ್ಷಣಿಕ ಸಾಲಿನಲ್ಲಿ ಈ ಸಂಘಕ್ಕೆ ಅಧ್ಯಕ್ಷರನ್ನಾಗಿ ಐಡಾರವರು ಆಯ್ಕೆ ಆದರು. ಉಪಾಧ್ಯಕ್ಷರಾಗಿ ಅಬೂಬಕ್ಕರ್ರವರು, ಜತೆ ಕಾರ್ಯದರ್ಶಿಯಾಗಿ ಪ್ರಸಿಲ್ಲ, ಕೋಶಾಧಿಕಾರಿಯಾಗಿ ಅಶ್ರಫ್, ಸಂಘಟನಾ ಕಾರ್ಯದರ್ಶಿಯಾಗಿ ಝೀಟ ಐರಿನ್ರವರನ್ನು ಆಯ್ಕೆ ಮಾಡಲಾಯಿತು. ಇದೇ ಸಂದರ್ಭದಲ್ಲಿ ಪದಾಧಿಕಾರಿಗಳನ್ನು ಹೂಗುಚ್ಛ ನೀಡಿ ಗೌರವಿಸಲಾಯಿತು. ಶಿಕ್ಷಕ ರವಿಶಂಕರ್ ಸ್ವಾಗತಿಸಿದರು.ಶಿಕ್ಷಕಿ ಮೋಹಿನಿ ಧನ್ಯವಾದ ನೀಡಿದರು ಮತ್ತು ದೈಹಿಕ ಶಿಕ್ಷಕರಾದ ತ್ಯಾಗಂರವರು ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕರಾದ ಕುಮುದ, ಶಿವಕುಮಾರ್, ಕೃಷ್ಣಶಾಸ್ತ್ರಿ, ಉಷಲತಾ, ನೂತನ, ಸ್ಮಿತಾ ಕುಮಾರಿ ಉಪಸ್ಥಿತರಿದ್ದರು.