Site icon Ullalavani

ವಿದ್ಯಾರ್ಥಿಗಳು ಯೋಗವನ್ನು ದೈನಂದಿನ ಚಟುವಟಿಕೆಯಾಗಿ ರೂಢಸಿಕೊಳ್ಳಿ : ಹರೀಶ್ಚಂದ್ರ ಶೆಟ್ಟಿ

UN NETWORKS

ಹರೇಕಳ: ವಿದ್ಯಾರ್ಥಿಗಳು ದೈಹಿಕವಾಗಿ, ಮಾನಸಿಕವಾಗಿ, ಆಧ್ಯಾತ್ಮಿಕವಾಗಿ ಬಲಿಷ್ಠರಾಗಬೇಕಾದರೆ ಯೋಗವನ್ನು ದೈನಂದಿನ ಚಟುವಟಿಕೆಯನ್ನಾಗಿ ರೂಢಿಸಿಕೊಳ್ಳಬೇಕು ಎಂದು ಉದ್ಯಮಿ ಹರಿಶ್ಚಂದ್ರ ಶೆಟ್ಟಿ ಅಭಿಪ್ರಾಯಪಟ್ಟರು.

ಶ್ರೀರಾಮಕೃಷ್ಣ ಅನುದಾನಿತ ಪ್ರೌಢ ಶಾಲೆ, ಹರೇಕಳ ಇದರ ಸೌಜನ್ಯ ಸ್ಕೌಟ್ ದಳ ಮತ್ತು ಚೈತನ್ಯ ಕ್ರೀಡಾ ಸಂಘ, ವತಿಯಿಂದ ರಾಮಕೃಷ್ಣ ಸಭಾಂಗಣದಲ್ಲಿ ನಡೆದ ವಿಶ್ವಯೋಗ ದಿನಾಚರಣೆಗೆ ಚಾಲನೆ ನೀಡಿ ಮಾತನಾಡಿದರು. ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳಲು ಯೋಗ ಮತ್ತು ಪ್ರಾಣಾಯಾಮವು ಪ್ರಮುಖ ಪಾತ್ರವಹಿಸುತ್ತದೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳಿ ಒಳ್ಳೆಯ ಭವಿಷ್ಯವನ್ನು ನಿರ್ಮಾಣ ಮಾಡಲು ತಯಾರಾಗಬೇಕು ಎಂದರು.

ಮುಖ್ಯ ಅತಿಥಿಯಾಗಿ ಲಯನ್ಸ್ ಕ್ಲಬ್ ಮಂಗಳಗಂಗೊತ್ರಿಯ ಮಾಜಿ ಅಧ್ಯಕ್ಷ ರಾಜೇಶ್ ಶೆಟ್ಟಿ ಪಜೀರುಗುತ್ತುರವರು ಪ್ರತಿ ದಿನ ಯೋಗ ಮಾಡುವುದರಿಂದ ಮನಸ್ಸು ಪರಿಶುದ್ಧಗೊಂಡು ಉಲ್ಲಾಸದಿಂದ ಇರಲು ಸಾಧ್ಯವಿದೆ ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯೋಪಾಧ್ಯಾಯ ಕೆ. ರವೀಂದ್ರ ರೈ ವಹಿಸಿದ್ದರು. ಆರ್ಟ್ ಆಫ್ ಲೀವಿಂಗ್ ಸಂಸ್ಥೆಯ ಯೋಗ ಸದಸ್ಯರಾದ ಶಿವಪ್ರಕಾಶ್ ಪಕ್ಕಳ, ಸುನೀತಾ ಉದಯ ಕುಮಾರ್, ರೇಖಾ ಇವರು ಯೋಗಾಭ್ಯಾಸವನ್ನು ನೆರವೇರಿಸಿ ಕೊಟ್ಟರು. ಶಿಕ್ಷಕ ರವಿಶಂಕರ್ ಸ್ವಾಗತಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ತ್ಯಾಗಂ ಹರೇಕಳ ಪ್ರಸ್ತಾವನೆಗೈದು ಕಾರ್ಯಕ್ರಮ ನಿರ್ವಹಿಸಿದರು. ಕೌಶಿಕ್ ಪ್ರಾರ್ಥಿಸಿದರು. ಹಿರಿಯ ಶಿಕ್ಷಕಿ ಉಷಾಲತ ವಂದಿಸಿದರು.

Exit mobile version