UN NETWORKS
ತಲಪಾಡಿ: ವಿದ್ಯಾರ್ಥಿಗಳು ಮಾದಕ ದ್ರವ್ಯದ ಸೇವನೆಯಿಂದಾಗುವ ದುಷ್ಪರಿಣಾಮಗಳ ಬಗ್ಗೆ ತಿಳಿದುಕೊಂಡು, ಸಮಾಜ ತಿದ್ದುವ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕು ಎಂದು ಯೆನಪೋಯ ಮೆಡಿಕಲ್ ಕಾಲೇಜಿನ ಪೆಥಾಲಜಿ ವಿಭಾಗದ ವೈದ್ಯೆ ಡಾ| ಪಲ್ಲವಿ ಅಭಿಪ್ರಾಯಪಟ್ಟರು.
ಅವರು ಶಾರದಾ ವಿದ್ಯಾನಿಕೇತನದಲ್ಲಿ ಹಮ್ಮಿಕೊಳ್ಳಲಾಗಿದ್ದ ಮಾದಕ ವ್ಯಸನ ವಿರೋಧಿ ದಿನಾಚರಣೆಯಲ್ಲಿ ಮುಖ್ಯ ಅಥಿತಿಗಳಾಗಿ ಭಾಗವಹಿಸಿ, ಮಾದಕ ವಸ್ತುಗಳ ಸೇವನೆಗೆ ಕಾರಣ, ಪರಿಣಾಮ ಮತ್ತು ಅದನ್ನು ಹೇಗೆ ತಡೆಗಟ್ಟಬಹುದು ಎಂಬುದರ ಕುರಿತು ವಿದ್ಯಾರ್ಥಿಗಳಿಗೆ ಉಪನ್ಯಾಸವನ್ನು ನೀಡಿದರು.
ಈ ಕಾರ್ಯಕ್ರಮದಲ್ಲಿ ಶಾಲಾ ಪ್ರಾಂಶುಪಾಲೆ ಸುಷ್ಮ ದಿನಕರ್, ಉಪಪ್ರಾಂಶುಪಾಲ ಮೋಹನ್ ದಾಸ್, ಯೆನಪೋಯ ಮೆಡಿಕಲ್ ಕಾಲೇಜಿನ ಪೆಥಾಲಜಿ ವಿಭಾಗದ ಮುಖ್ಯಸ್ಥೆ ಡಾ| ಮೇಝಿ ಜೋಶ್, ವೈದ್ಯರುಗಳಾದ ಡಾ| ವಿಷ್ಣುದಾಸ್ ಪ್ರಭು, ಡಾ| ಚೇತನ್, ಡಾ| ರೇಖಾ, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.