Site icon Ullalavani

ಮನೆ ಕುಸಿತ ಪ್ರದೇಶಕ್ಕೆ ಸಂಸದ ನಳಿನ್ ಕಟೀಲ್ ಭೇಟಿ

UN NETWORKS

ಉಳ್ಳಾಲ: ಜಿಲ್ಲೆಯಾದ್ಯಂತ ಕುಂಭದ್ರೋಣ ಹಾಗೂ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಸಾರ್ವಜನಿಕ ಸೊತ್ತುಗಳಿಗೆ ಅಪಾರ ಹಾನಿಯಾಗಿದೆ . ರಾಜ್ಯ ಸರಕಾರ ತುರ್ತು ಕ್ರಮಕೈಗೊಂಡು ಶೀಘ್ರವೇ ಸಂತ್ರಸ್ತರಿಗೆ ಪರಿಹಾರ ಒದಗಿಸಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. ಉಳ್ಳಾಲ ನಗರಸಭೆ ವ್ಯಾಪ್ತಿಯ 23 ನೇ ವಾರ್ಡಿನಲ್ಲಿ ಬುಧವಾರ ಕುಸಿದುಬಿದ್ದ ಶಾರದಾ ಎಂಬವರ ಮನೆಗೆ ಗುರುವಾರ ಭೇಟಿ ನೀಡಿ ಮಾತನಾಡಿದರು.

ಕೆರೆಬೈಲುಗುಡ್ಡೆಯಲ್ಲಿ ಮನೆ ಕುಸಿತಗೊಂಡಿರುವ ಕುರಿತು ಜಿಲ್ಲಾಧಿಕಾರಿ ಜತೆಗೆ ಮಾತನಾಡಿ ತ್ವರಿತ ಪರಿಹಾರ ಮತ್ತು ದುರಸ್ತಿ ಕಾರ್ಯಕ್ಕೆ ಸೂಚಿಸುತ್ತೇನೆ. ಈಗಾಗಲೇ ಕಂದಾಯ ಅಧಿಕಾರಿ ಭೇಟಿ ನೀಡಿ ಮಾಹಿತಿಯನ್ನು ಸಂಗ್ರಹಿಸಿದ್ದಾರೆ. ಜಿಲ್ಲೆಯಾದ್ಯಂತ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಅಪಾರ ಸಾರ್ವಜನಿಕ ಸೊತ್ತುಗಳಿಗೆ ಹಾನಿ, ರಸ್ತೆಗಳಿಗೆ ಹಾನಿಯಾಗಿದೆ. ರಾಜ್ಯ ಸರಕಾರ ಕೂಡಲೇ ಸಂತ್ರಸ್ತರ ಹಾಗೂ ಸಾರ್ವಜನಿಕ ಸೊತ್ತುಗಳ ಹಾನಿ ಕುರಿತ ವರದಿ ಸಂಗ್ರಹಿಸಿ ಪರಿಹಾರವನ್ನು ಘೋಷಿಸಿ ತುರ್ತಾಗಿ ಒದಗಿಸಬೇಕಿದೆ ಎಂದರು.

ಈ ಸಂದರ್ಭ ಮಂಗಳೂರು ಕ್ಷೇತ್ರ ಬಿಜೆಪಿ ಅಧ್ಯಕ್ಷ ಸಂತೋಷ್ ರೈ ಬೋಳಿಯಾರ್, ಜಿ.ಪಂ ಮಾಜಿ ಉಪಾಧ್ಯಕ್ಷ ಸತೀಶ್ ಕುಂಪಲ, ಮಾಜಿ ಶಾಸಕ ಜಯರಾಮ ಶೆಟ್ಟಿ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಚಂದ್ರಹಾಸ್ ಉಳ್ಳಾಲ್, ಚಂದ್ರಶೇಖರ್ ಉಚ್ಚಿಲ್, ಬಿಜೆಪಿ ಜಿಲ್ಲಾ ಉಸ್ತುವಾರಿ ರಾಮಚಂದ್ರ ಬೈಕಂಪಾಡಿ, ಬಿಜೆಪಿ ರಾಜ್ಯ ಕಾರ್ಯಕಾರಿಣಿ ಮಂಡಳಿ ಸದಸ್ಯ ರವೀಂದ್ರ ಶೆಟ್ಟಿ ಉಳಿದೊಟ್ಟು, ಚಂದ್ರಹಾಸ್ ಪಂಡಿತ್ ಹೌಸ್, ನಗರಸಭೆ ಸದಸ್ಯೆ ಸರಿತಾ ಜೀವನ್ ಕುಮಾರ್, ಜೀವನ್ ಕುಮಾರ್ ತೊಕ್ಕೊಟ್ಟು ಮುಂತಾದವರು ಉಪಸ್ಥಿತರಿದ್ದರು.

Exit mobile version