Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
UllalavaniUllalavani
ಗ್ರಾಮ

ತಲಪಾಡಿ ಟೋಲ್ ಗೇಟ್ ವಿರುದ್ಧ ಗ್ರಾಮಸ್ಥರ ಆಕ್ರೋಶ

UllalaVaniBy UllalaVaniJune 30, 2018Updated:June 30, 2018No Comments4 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

UN NETWORKS

ಉಳ್ಳಾಲ: ಟೋಲ್ ಸಂಗ್ರಹ ವೇಳೆ ಮಹಿಳಾ ಸಿಬ್ಬಂದಿಯೊಂದಿಗೆ ಕಾರು ಚಾಲಕರು ಅನುಚಿತವಾಗಿ ವರ್ತಿಸುತ್ತಿದ್ದಾರೆ. ಇದನ್ನು ಇತರೆ ಸಿಬ್ಬಂದಿ ಪ್ರಶ್ನಿಸಿದಾಗ ನಡೆಯುವ ಗಲಾಟೆಗೆ ಬಣ್ಣ ಹಚ್ಚುವ ಮೂಲಕ ಮಾಸಿಕ ವೇತನಕ್ಕೆ ದುಡಿಯುವ ಸಿಬ್ಬಂದಿಯನ್ನೇ ಗೂಂಡಾಗಳೆಂದು ಕರೆಯಲಾಗುತ್ತಿದೆ ಎಂದು ಟೋಲ್ ಸಿಬ್ಬಂದಿಯೇ ಆಗಿರುವ ತಲಪಾಡಿ ಗ್ರಾಮ ಪಂಚಾಯಿತಿ ಸದಸ್ಯೆ ಅಕ್ಷತಾ ಆರೋಪಿಸಿದರು.

ತಲಪಾಡಿ ಗ್ರಾಮ ಪಂಚಾಯಿತಿನ 2018-19ರ ಸಾಲಿನ ಪ್ರಥಮ ಹಂತದ ಶುಕ್ರವಾರ ನಡೆದ ಗ್ರಾಮಸಭೆಯಲ್ಲಿ ಭಾಗವಹಿಸಿ ಮಾತನಾಡಿದರು. ರಸ್ತೆ ಸರಿಯಿಲ್ಲದೇ ಟೋಲ್ ಪಡೆಯುವುದು ತಪ್ಪು ಎಂದು ಗೊತ್ತಿದೆ. ಸಂಬಂಧಪಟ್ಟ ಗುತ್ತಿಗೆ ವಹಿಸಿಕೊಂಡ ಸಂಸ್ಥೆಯವರೊಡನೆ ಹೋರಾಟ ನಡೆಸುವವರು ಮಾತನಾಡಬೇಕಿದೆ. ಆದರೆ ತಿಂಗಳ ವೇತನಕ್ಕೆ ದುಡಿಯುವ ಸಿಬ್ಬಂದಿ ಮೇಲೆ ಹೋರಾಟ ನಡೆಸುವವರು ಆರೋಪಗಳನ್ನು ಮಾಡುತ್ತಿರುವುದು ಸರಿಯಲ್ಲ. ಕರ್ತವ್ಯ ನಿರ್ವಹಣೆ ಸಂದರ್ಭ ಕೇರಳ ಭಾಗದಿಂದ ಬರುವ ಮತ್ತು ಹೋಗುವ ಕಾರುಗಳಲ್ಲಿರುವ ಯುವಕರು ಹಣ ಪಡೆದುಕೊಳ್ಳುವಾಗ ಮಹಿಳಾ ಸಿಬ್ಬಂದಿ ಜೊತೆಗೆ ಅನುಚಿತವಾಗಿ ವರ್ತಿಸುವ ಕೆಲಸ ಮಾಡುತ್ತಿದ್ದಾರೆ. ಇದನ್ನು ವಿರೋಧಿಸಿದರೆ ಗಲಾಟೆಯನ್ನೇ ನಡೆಸುವ ಕೆಲಸವಾಗುತ್ತಿದೆ ಎಂದು ಆರೋಪಿಸಿದರು.

ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ಸುಳಿವೇ ಇಲ್ಲ : ರಾಷ್ಟ್ರೀಯ ಹೆದ್ದಾರಿ ಅವ್ಯವಸ್ಥೆಯಿಂದಾಗಿ ಇತ್ತೀಚೆಗೆ ಗ್ರಾಮದ ವ್ಯಕ್ತಿಯೋರ್ವರು ರಸ್ತೆ ಅಪಘಾತಕ್ಕೆ ಬಲಿಯಾಗಿದ್ದಾರೆ. ಇದನ್ನು ಪಂಚಾಯಿತಿ ಗಂಭೀರವಾಗಿ ಪರಿಗಣಿಸಿ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳನ್ನು ಗ್ರಾಮಸಭೆಯಲ್ಲಿ ಭಾಗವಹಿಸುವಂತೆ ಮಾಡಬೇಕಿತ್ತು. ರಸ್ತೆಯಿಡೀ ಅವ್ಯವಸ್ಥೆಯಿಂದ ಕೂಡಿದ್ದರೂ ಸುಂಕ ವಸೂಲಾತಿ ಕೇಂದ್ರದಲ್ಲಿ ಸುಂಕ ವಸೂಲಿ ಮಾಡುತ್ತಿರುವುದು ಜನರಿಗೆ ಮಾಡುತ್ತಿರುವ ಅನ್ಯಾಯ. ಈ ಬಗ್ಗೆ ಹಲವು ಗ್ರಾಮಸಭೆಗಳಲ್ಲಿ ಗ್ರಾಮದಲ್ಲೇ ಇರುವ ಸುಂಕ ವಸೂಲಾತಿ ಕೇಂದ್ರದ ವಿರುದ್ಧ ಕ್ರಮಕೈಗೊಳ್ಳಲು ಒತ್ತಾಯಿಸಲಾಗಿದೆ ಆದರೆ ಈವರೆಗೂ ಯಾವುದೇ ರೀತಿಯ ಕ್ರಮ ಕೈಗೊಳ್ಳಲಾಗಿಲ್ಲ ಎಂದು ಗ್ರಾಮಸ್ಥರು ಪ್ರಶ್ನಿಸಿದರು.

ಉತ್ತರಿಸಿದ ತಲಪಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಸುರೇಶ್ ಆಳ್ವ ` ಕೇಂದ್ರ ಸರಕಾರ ಮಾಡಿಕೊಂಡಿರುವ ಒಪ್ಪಂದದಂತೆ ಯಾವುದೇ ರೀತಿಯ ಆದೇಶವನ್ನು ಸುಂಕ ವಸೂಲಾತಿ ನಡೆಸುತ್ತಿರುವ ಸಂಸ್ಥೆಗೆ ಮಾಡಲು ಸಾಧ್ಯವಾಗುತ್ತಿಲ್ಲ. ಹಲವು ಬಾರಿ ಸಮಸ್ಯೆಗಳ ಕುರಿತು ಸೂಚಿಸಿದರೂ ಯಾವುದೇ ಪ್ರತಿಕ್ರಿಯೆ ಸಿಕ್ಕಿಲ್ಲ. ಕೇಂದ್ರದ ಕಟ್ಟಡವೂ ಪಂಚಾಯಿತಿ ವ್ಯಾಪ್ತಿಗೆ ಒಳಪಟ್ಟಿದ್ದರೂ ಅದನ್ನು ನಿರ್ಮಿಸಲು ಯಾವುದೇ ಅನುಮತಿಯನ್ನು ಸಂಸ್ಥೆ ಪಡೆದುಕೊಂಡಿಲ್ಲ. ಈ ನಿಟ್ಟಿನಲ್ಲಿ ಸುಂಕ ವಸೂಲಾತಿ ಕೇಂದ್ರದ ನಿಯಂತ್ರಣ ಪಂಚಾಯಿತಿನಿಂದ ಕೈಗೊಳ್ಳಲು ಸಾಧ್ಯವಾಗುತ್ತಿಲ್ಲ ಎಂದರು.

ಜಿಲ್ಲೆಯ ಮೀನಿನಲ್ಲಿ ರಾಸಾಯನಿಕ ಇಲ್ಲ : ಮೀನುಗಾರಿಕಾ ಇಲಾಖೆಯ ಸುಷ್ಮಿತಾ ಅಧಿಕಾರಿ ಮಾತನಾಡಿ ಜಿಲ್ಲೆಯಲ್ಲಿ ಸರಬರಾಜಾಗುವ ಹಸಿ ಮೀನಿನಲ್ಲಿ ಯಾವುದೇ ರೀತಿಯ ರಾಸಾಯನಿಕಗಳು ಮಿಶ್ರಣಗೊಂಡಿರುವುದು ಕಂಡುಬಂದಿಲ್ಲ. ಹೊರಗಡೆಯಿಂದ ಬಂದಿರುವ ಮೀನುಗಳಲ್ಲಿ ಇರುವ ಸಾಧ್ಯತೆಗಳು ಇರಬಹುದು. ಮೀನು ಮಾರಾಟಗಾರರಿಗೆ ಇಲಾಖೆ ಹಲವು ಯೋಜನೆಗಳನ್ನು ನೀಡುತ್ತಿದೆ. ತ್ರಿಚಕ್ರ ವಾಹನಗಳಿಗೆ ರೂ.30,000 ಹಾಗೂ ನಾಲ್ಕು ಚಕ್ರ ವಾಹನಗಳಿಗೆ ರೂ. 40,000 ಪ್ರೋತ್ಸಾಹ ಧನವನ್ನು ಮೀನು ಮಾರಾಟ ನಡೆಸುವ ಎಲ್ಲಾ ಜಾತಿಯವರಿಗೆ ನೀಡಲು ಇಲಾಖೆಯಲ್ಲಿ ಅವಕಾಶವಿದೆ. ಮೀನಿನ ಕಸುಬು ನಡೆಸುವ ಮಹಿಳೆಯರಿಗೆ ಶೂನ್ಯ ಬಡ್ಡಿ ದರದಲ್ಲಿ ರೂ. 50,000 ಸಾಲ ರಾಷ್ಟ್ರೀಕೃತ ಬ್ಯಾಂಕಿನಿಂದ ಪಡೆಯಬಹುದು. ಗುಂಪು ಚಟುವಟಿಕೆಯಲ್ಲಿ ನಡೆಸಲು ಆರಂಭಿಸಿದರೂ ಕೊಡುವ ಅವಕಾಶವಿದೆ ಎಂದರು.

ಕರೆ ಸ್ವೀಕರಿಸುತ್ತಿಲ್ಲ : ಮೆಸ್ಕಾಂನ ಸ್ಥಿರ ದೂರವಾಣಿಗೆ ಕರೆ ಮಾಡಿದರೆ ಸ್ವೀಕರಿಸುತ್ತಿಲ್ಲ. ಹಲವು ಕರೆಗಳಿಗೆ ಸ್ಪಂಧನೆಯೂ ಸಿಗುತ್ತಿಲ್ಲ. ತಂತಿಗಳು ತುಂಡಾಗಿ ರಸ್ತೆಯಲ್ಲಿ ಬಿದ್ದಾಗ ತುರ್ತಾಗಿ ಕ್ರಮಕೈಗೊಳ್ಳದೇ ಇದ್ದಲ್ಲಿ ಸಾವು ಸಂಭವಿಸುವ ಸಾಧ್ಯತೆಗಳಿವೆ ಎಂದು ಮೆಸ್ಕಾಂ ಅಧಿಕಾರಿಯನ್ನು ಗ್ರಾಮಸ್ಥರು ತರಾಟೆಗೆ ತೆಗೆದುಕೊಂಡರು. ಸ್ಥಿರ ದೂರವಾಣಿಯಿಂದ ಮೆಸ್ಕಾಂ ಸಿಬ್ಬಂದಿ ಸಂಪರ್ಕಿಸಲು ಅಸಾಧ್ಯವಾದರೆ 1912 ಸಹಾಯವಾಣಿಗೆ ಕರೆ ಮಾಡಿ ದೂರು ನೀಡಲು ಅವಕಾಶವಿದೆ. ಸ್ಥಳೀಯ ಪರಿಚಿತರಿಗೆ ತನ್ನ ಮೊಬೈಲ್ ನಂಬರನ್ನೇ ನೀಡಿದ್ದೇನೆ. ಈ ಮೂಲಕ ಕ್ಷಣ ಮಾತ್ರದಲ್ಲಿ ಸಮಸ್ಯೆಗಳನ್ನು ಬಗೆಹರಿಸುವ ಪ್ರಯತ್ನ ಮೆಸ್ಕಾಂನಿಂದ ಆಗಿದೆ. ಈ ಬಾರಿ ಗಾಳಿಮಳೆ ಬಹಳಷ್ಟು ಜೋರಾಗಿರುವುದರಿಂದ ಕೆಲ ಸಮಯದಲ್ಲಿ ಅಸಾಧ್ಯವಾಗಿರಬಹುದು ಎಂದರು.

ಬೀದಿ ನಾಯಿ ಕಾಟ: ಕಳೆದ ನಾಲ್ಕು ಗ್ರಾಮಸಭೆಗಳಲ್ಲಿ ಬೀದಿ ನಾಯಿ ಹಿಡಿಯುವ ಕುರಿತು ಚರ್ಚೆ ನಡೆಯುತ್ತಲೇ ಇದೆ. ನಿರ್ಣಯ ಪುಸ್ತಕದಲ್ಲಿ ಬೀದಿ ನಾಯಿಗಳ ನಿಯಂತ್ರಣ ಕುರಿತು ದಾಖಲೆ ಮಾಡುತ್ತಲೇ ಬಂದಿದ್ದೇವೆ. ಆದರೂ ನಿಯಂತ್ರಣಕ್ಕೆ ತರಲು ಅಧಿಕಾರಿಗಳಿಗೆ ಅಸಾಧ್ಯವಾಗಿದೆ. ಮಕ್ಕಳು ರಸ್ತೆಬದಿಯಲ್ಲಿ ಹೋಗುವಾಗ ಬಹಳಷ್ಟು ತೊಂದರೆಯಾಗುತ್ತಿದೆ . ಕೂಡಲೇ ನಾಯಿಗಳ ವಿರುದ್ಧ ಕ್ರಮಕೈಗೊಲ್ಳಬೇಕೆಂದು ಗ್ರಾಮಸ್ಥರು ಆಗ್ರಹಿಸಿದರು. ಉತ್ತರಿಸಿದ ಅಭಿವೃದ್ಧಿ ಅಧಿಕಾರಿ ಚೆನ್ನೈನ ಅನಿಮಲ್ ವೆಲ್ಫೇರ್ ಬೋರ್ಡ್ ಆಫ್ ಇಂಡಿಯಾ, ಅನಿಮಲ್ ಕೇರ್ ಮಂಗಳೂರು ಅವರ ಆದೇಶವನ್ನು ಪಂಚಾಯಿತಿ ಪಾಲನೆ ಮಾಡಬೇಕಾಗಿದೆ. ಸದ್ಯ ಹಿಡಿದು ಸಾಯಿಸುವುದು ಕಾನೂನು ಉಲ್ಲಂಘನೆ ಎಂದರು. ಇತರೆ ಸಂಸ್ಥೆಗಳು ಕ್ರಮಕ್ಕೆ ಮನಸ್ಸು ಮಾಡಿದಲ್ಲಿ ಅದರ ಖರ್ಚು-ವೆಚ್ಛವನ್ನು ಭರಿಸಲು ಪಂಚಾಯಿತಿ ಸಿದ್ಧ ಎಂದರು. ಆದರೂ ಕರಡು ಪುಸ್ತಕದಲ್ಲಿ ಹುಚ್ಚು ನಾಯಿ ಮತ್ತು ಮಾಲೀಕನಿಲ್ಲದ ನಾಯಿಗಳನ್ನು ಕೊಲ್ಲಬಹುದು ಅನ್ನುವ ಉಲ್ಲೇಖವಿದೆ. ಅದನ್ನು ಪಾಲಿಸಬಹುದಲ್ಲವೇ ಎಂದು ಗ್ರಾಮಸ್ಥ ಅಬ್ಬಾಸ್ ಉಚ್ಚಿಲ್ ಪ್ರಶ್ನಿಸಿದರು.

ಜಿ.ಪಂ ಸದಸ್ಯೆ ಇಲ್ಲ: ಜಿಲ್ಲಾ ಪಂಚಾಯಿತಿನಿಂದ ಬರುವ ಹಲವು ಯೋಜನೆಗಳ ಕುರಿತು ಗ್ರಾಮಸ್ಥರಿಗೆ ಅರಿವೇ ಇಲ್ಲ. ಜಿ.ಪಂ ನಿಂದ ಆಗಬೇಕಾದ ಕಾಮಗಾರಿ ವಿವರಗಳನ್ನು ಹೇಳುವ ಅಂದರೆ ಜಿಲ್ಲಾ ಪಂಚಾಯಿತಿ ಸದಸ್ಯರೇ ಗ್ರಾಮಸಭೆಗೆ ಬರುತ್ತಿಲ್ಲ. ಚುನಾವಣೆ ಗೆದ್ದ ಬಳಿಕ ಒಂದು ಬಾರಿ ಮಾತ್ರ ಜಿ.ಪಂ ಸದಸ್ಯೆ ಗ್ರಾಮಸಭೆಗೆ ಬಂದಿದ್ದಾರೆ. ಆ ಬಳಿಕ ನಡೆದ ಹಲವು ಗ್ರಾಮಸಭೆಗಳಿಗೂ ಸದಸ್ಯೆ ಭಾಗವಹಿಸಿಲ್ಲ. ಮುಂದಿನ ಗ್ರಾಮಸಭೆಯಲ್ಲಿ ಜಿ.ಪಂ ಸದಸ್ಯೆ ಬಾರದೇ ಇದ್ದಲ್ಲಿ ಸಭೆಯನ್ನು ನಡೆಸಲು ಬಿಡುವುದಿಲ್ಲ ಎಂದು ಗ್ರಾಮಸ್ಥ ಸಿದ್ದೀಖ್ ತಲಪಾಡಿ ಎಚ್ಚರಿಸಿದರು. ಉತ್ತರಿಸಿದ ಪಂ.ಅಭಿವೃದ್ಧಿ ಅಧಿಕಾರಿ ಪ್ರತಿ ಗ್ರಾಮಸಭೆಗೂ ಅವರನ್ನು ಆಹ್ವಾನಿಸಲಾಗುತ್ತಿದೆ. ಪತ್ರದ ಮೂಲಕ ಕರೆದರೂ ಅವರು ಬರುತ್ತಿಲ್ಲ. ಈ ಕುರಿತು ಅವರ ಗಮನಕ್ಕೆ ತರುವುದಾಗಿ ತಿಳಿಸಿದರು.

ಕುಡಿಯುವ ನೀರು ಅಧಿಕಾರಿ ತರಾಟೆಗೆ : ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕುರಿತು ಗ್ರಾಮಸ್ಥರು ಅಧಿಕಾರಿಯನ್ನು ತರಾಟೆಗೆ ಪಡೆದುಕೊಂಡರು. ಪ್ರತಿಯೊಂದು ಗ್ರಾಮಸಭೆಯಲ್ಲೂ ಮಂಗಳೂರು ಕ್ಷೇತ್ರದಲ್ಲೇ ಬಹುಗ್ರಾಮ ಕುಡಿಯುವ ನೀರು ಯೋಜನೆ ವಂಚಿತ ತಲಪಾಡಿ ಪಂಚಾಯಿತಿನ ಕುರಿತು ಅಧಿಕಾರಿಗಳು ನಿರ್ಣಯವನ್ನು ಪಡೆಯುತ್ತಲೇ ಬಂದಿದ್ದಾರೆ. ಈವರೆಗೂ ಅದರ ಸ್ಥಾಪನೆಯಾಗಿಲ್ಲ. ಗ್ರಾಮದಲ್ಲಿ ನೀರಿನ ಸಮಸ್ಯೆ ಬಹಳಷ್ಟು ತಲೆದೋರಿದೆ. ಉತ್ತರಿಸಿದ ಅಧಿಕಾರಿ ಹಿಂದಿನ ಪ್ರಸ್ತಾವಿತ ಕುಡಿಯುವ ನೀರಿನ ಯೋಜನೆಯ ರೂಪುರೇಷೆ ಬದಲಾಯಿಸಲಾಗಿದ್ದು, ಸರಕಾರದ ಆದೇಶದಂತೆ ಬದಲಾಯಿಸಲಾಗಿದೆ. ಹೊಸತಾದ ಸ್ಕೆಚ್ ಬಂದ ಬಳಿಕವಷ್ಟೇ ಅನುಷ್ಠಾನ ನಡೆಬೇಕಿದೆ. ಸರಕಾರ ನೀಡಿದಲ್ಲಿ ಅನುಷ್ಠಾನಗೊಳಿಸುವದಷ್ಟೇ ಇಲಾಖೆಯ ಕೆಲಸ ಎಂದರು.

ಅತ್ಯಾಚಾರ ಸಂತ್ರಸ್ತರಿಗೆ ಸಹಾಯಧನ : ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಅತ್ಯಾಚಾರಕ್ಕೆ ಒಳಗಾಗುವ ಸಂತ್ರಸ್ತೆ ಯುವತಿಯರಿಗೆ ದಾಖಲೆಗಳನ್ನು ಪರಿಶೀಲಿಸಿ ಅದರ ಆಧಾರದಂತೆ ಚಿಕಿತ್ಸೆಗೆ ರೂ. 5,000 ದಿಂದ ರೂ. 5 ಲಕ್ಷವರೆಗೆ ನೀಡಲಾಗುವುದು. ಇದಕ್ಕೆ ಗ್ರಾಮಸ್ಥರು ಇದೊಂದು ಅತ್ಯಾಚಾರಕ್ಕೆ ಪ್ರಚೋದಿಸುವುದಂತಹ ಕಾನೂನು ಅಲ್ಲವೇ? ಅನ್ನುವುದನ್ನು ಪ್ರಶ್ನಿಸಿದ ಹಿನ್ನೆಲೆಯಲ್ಲಿ ಆರ್ಥಿಕವಾಗಿ ದುರ್ಬಲರಾದ ಯುವತಿಯರು ಕಂಗೆಟ್ಟಾಗ, ಚಿಕಿತ್ಸೆಗೂ ಹಣವಿಲ್ಲದೆ ಕೊರುಗವಂತಹ ಸಮಯದಲ್ಲಿ ಸರಕಾರ ಬೆನ್ನೆಲುಬಾಗಿ ನಿಲ್ಲುವುದು ಪ್ರಚೋದಿಸುವಂತಹ ಕಾರ್ಯವಲ್ಲ ಅಂದರು.

ತಲಪಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಸುರೇಶ್ ಆಳ್ವ ಅಧ್ಯಕ್ಷತೆ ವಹಿಸಿದ್ದರು. ಮಹಿಳಾ ಮತ್ತು ಕಲ್ಯಾಣ ಇಲಾಖೆಯ ಅಧಿಕಾರಿ ಶ್ಯಾಮಲಾ ನೋಡೆಲ್ ಅಧಿಕಾರಿಯಾಗಿ ಭಾಗವಹಿಸಿದ್ದರು. ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಕೇಶವ , ತಾಲೂಕು ಪಂಚಾಯಿತಿ ಸದಸ್ಯ ಸಿದ್ದೀಖ್ ಕೊಳಂಗೆರೆ, ಉಪಾಧ್ಯಕ್ಷೆ ಜಯಲಕ್ಷ್ಮೀ ಮೊದಲಾದವರು ಉಪಸ್ಥಿತರಿದ್ದರು.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...
Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಉಳ್ಳಾಲ ಮಸೀದಿಗೆ ಬಾಂಬ್ ಬೆದರಿಕೆ ಪೋಸ್ಟ್: ಕಠಿಣ ಕ್ರಮಕ್ಕೆ ಯು.ಟಿ. ಖಾದರ್ ಸೂಚನೆ

March 3, 2026

ನೇತ್ರಾವತಿ ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನ – ವ್ಯಕ್ತಿಯ ರಕ್ಷಣೆ

March 2, 2026

ಮುಡಿಪಿನಲ್ಲಿ “ಗೋ ಗ್ಯಾಸ್” ವಿಶೇಷ ಹೊಸ ವರ್ಷದ ಆಫರ್

February 26, 2026
Leave A Reply

Advertise
ಸಂಪರ್ಕಿಸಿ

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

ಉಚಿತ ಹೋಮಿಯೋಪಥಿ ಆರೋಗ್ಯ ತಪಾಸಣಾ ಹಾಗೂ ಮಾಹಿತಿ ಶಿಬಿರ

December 15, 2025

ಸೋಮೇಶ್ವರ ಲಯನ್ಸ್ ಕ್ಲಬ್ ಆಶ್ರಯದಲ್ಲಿ ನೇತ್ರಾ ತಪಾಸಣಾ ಶಿಬಿರ

December 6, 2025

ನೂತನ ಅತ್ಯಾಧುನಿಕ ಫಿಸಿಯೋಥೆರಪಿ ಚಿಕಿತ್ಸಾ ಕ್ಲಿನಿಕ್ ಉದ್ಘಾಟನೆ

November 12, 2025
KARNATAKA

ಯುಕೆಟಿಎಲ್ ಪರಿಹಾರ ವಿವಾದ: ಕರ್ನಾಟಕಕ್ಕಿಂತ ಕೇರಳದ ರೈತರಿಗೆ ಹೆಚ್ಚಿನ ಪರಿಹಾರ ಸಿಕ್ಕಿದೆಯೇ? ಇಲ್ಲಿದೆ ಅಸಲಿ ಲೆಕ್ಕಾಚಾರ

By UllalaVaniMarch 3, 20260

ಉಡುಪಿ-ಕಾಸರಗೋಡು 400 ಕೆವಿ ವಿದ್ಯುತ್ ಪ್ರಸರಣ ಮಾರ್ಗವು (UKTL) ದಕ್ಷಿಣ ಕನ್ನಡ ಜಿಲ್ಲೆಯ ಗದ್ದೆ ಮತ್ತು ತೋಟಗಳ ಮೂಲಕ ಹಾದುಹೋಗುತ್ತಿರುವಾಗ,…

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

ಉಳ್ಳಾಲ ಮಸೀದಿಗೆ ಬಾಂಬ್ ಬೆದರಿಕೆ ಪೋಸ್ಟ್: ಕಠಿಣ ಕ್ರಮಕ್ಕೆ ಯು.ಟಿ. ಖಾದರ್ ಸೂಚನೆ

March 3, 2026

ವಿದೇಶಿ ಕರೆನ್ಸಿ ಅಕ್ರಮ ಸಾಗಾಟ – ಓರ್ವ ಪುರುಷ, ಇಬ್ಬರು ಮಹಿಳೆಯರು ಸೆರೆ

March 2, 2026

ಇರಾನ್ ದಾಳಿ ; ಕರಾವಳಿಗರಲ್ಲಿ ಆತಂಕ ಬೇಡ – ಅನಿವಾಸಿ ಭಾರತೀಯರ ಮಾಹಿತಿ

March 2, 2026
1 2 3 … 1,819 Next
Automatic YouTube Gallery

ಉಳ್ಳಾಲ ಖಿಲೇರಿಯಾ ರಸ್ತೆ ಕಾಂಕ್ರಿಟೀಕರಣ | ಚರಂಡಿ ನಿರ್ಮಾಣಕ್ಕೆ ಸ್ಪಿಕರ್ ಯು.ಟಿ.ಖಾದರ್ ಶಿಲಾನ್ಯಾಸ

ಉಳ್ಳಾಲ ಖಿಲೇರಿಯಾ ರಸ್ತೆ ಕಾಂಕ್ರಿಟೀಕರಣ ಚರಂಡಿ ನಿರ್ಮಾಣಕ್ಕೆ ಯು.ಟಿ.ಖಾದರ್ ಶಿಲಾನ್ಯಾಸ; ಹಿರಿಯರಾದ ಮಹಮ್ಮದ್ ಮುಕಚ್ಚೇರಿ ಸಮ್ಮುಖದಲ್ಲೇ ಶಂಕು ಸ್ಥಾಪನೆ

ಕಾಮಗಾರಿಗೆ ಅಡ್ಡಿಪಡಿಸಿದ ಜನರ ಬಗ್ಗೆ ಯು.ಟಿ.ಕೆ ಹೇಳಿದ್ದೇನು..?
#ullalavani #news #Utkhader #Road #Ullala
ಉಳ್ಳಾಲ ಖಿಲೇರಿಯಾ ರಸ್ತೆ ಕಾಂಕ್ರಿಟೀಕರಣ | ಚರಂಡಿ ನಿರ್ಮಾಣಕ್ಕೆ ಸ್ಪಿಕರ್ ಯು.ಟಿ.ಖಾದರ್   ಶಿಲಾನ್ಯಾಸ
Now Playing
ಉಳ್ಳಾಲ ಖಿಲೇರಿಯಾ ರಸ್ತೆ ಕಾಂಕ್ರಿಟೀಕರಣ | ಚರಂಡಿ ನಿರ್ಮಾಣಕ್ಕೆ ಸ್ಪಿಕರ್ ಯು.ಟಿ.ಖಾದರ್ ಶಿಲಾನ್ಯಾಸ
ಉಳ್ಳಾಲ ಖಿಲೇರಿಯಾ ರಸ್ತೆ ಕಾಂಕ್ರಿಟೀಕರಣ ಚರಂಡಿ ನಿರ್ಮಾಣಕ್ಕೆ ಯು.ಟಿ.ಖಾದರ್ ...
ಉಳ್ಳಾಲ ಖಿಲೇರಿಯಾ ರಸ್ತೆ ಕಾಂಕ್ರಿಟೀಕರಣ ಚರಂಡಿ ನಿರ್ಮಾಣಕ್ಕೆ ಯು.ಟಿ.ಖಾದರ್ ಶಿಲಾನ್ಯಾಸ; ಹಿರಿಯರಾದ ಮಹಮ್ಮದ್ ಮುಕಚ್ಚೇರಿ ಸಮ್ಮುಖದಲ್ಲೇ ಶಂಕು ಸ್ಥಾಪನೆ

ಕಾಮಗಾರಿಗೆ ಅಡ್ಡಿಪಡಿಸಿದ ಜನರ ಬಗ್ಗೆ ಯು.ಟಿ.ಕೆ ಹೇಳಿದ್ದೇನು..?
#ullalavani #news #Utkhader #Road #Ullala
ಮಾ.4-8ರಂದು ಸಸಿಹಿತ್ಲು ಶ್ರೀ ಭಗವತಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಕಾರ್ಯಕ್ರಮ
Now Playing
ಮಾ.4-8ರಂದು ಸಸಿಹಿತ್ಲು ಶ್ರೀ ಭಗವತಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಕಾರ್ಯಕ್ರಮ
ಸಸಿಹಿತ್ಲು ಶ್ರೀ ಭಗವತಿ ದೇವಸ್ಥಾನದ ಬ್ರಹ್ಮಕಲಶೋತ್ಸವ;ಮಾ.4ರಂದು ವಿವಿಧ ಧಾರ್ಮಿಕ ...
ಸಸಿಹಿತ್ಲು ಶ್ರೀ ಭಗವತಿ ದೇವಸ್ಥಾನದ ಬ್ರಹ್ಮಕಲಶೋತ್ಸವ;ಮಾ.4ರಂದು ವಿವಿಧ ಧಾರ್ಮಿಕ ವಿಧಿವಿಧಾನಗಳೊಂದಿಗೆ ಆರಂಭ

ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ನಳೀನ್ ಕಟೀಲ್ ಮಾಹಿತಿ

#ullalavani #news #tulunad #ullala #latestnews #breakingnews #package #mangalore #Sasihitlutemple
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version
%d