ಉಳ್ಳಾಲ್ ನ್ಯೂಸ್ ನೆಟ್ ವರ್ಕ್
ತೊಕ್ಕೊಟ್ಟು: ಮೋದಿ ಸರಕಾರದ ಭೂಸ್ವಾಧೀನ ಸುಗ್ರೀವಾಜ್ಞೆ ರೈತರ ಪಾಲಿಗೆ ಮರಣ ಶಾಸನವಾಗಿದೆ ಎಂದು ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೆ.ಯಾದವ ಶೆಟ್ಟಿ ಹೇಳಿದರು.
ಅವರು ಇತ್ತೀಚೆಗೆ ತೊಕ್ಕೊಟ್ಟು ಕ್ಲಿಕ್ ಸಭಾ ಭವನದಲ್ಲಿ ಜರಗಿದ ಉಳ್ಳಾಲ ಪುರಸಭೆ ವ್ಯಾಪ್ತಿಯ ಮನೆ ನಿವೇಶನ ರಹಿತರ ಹೋರಾಟ ಸಮಾವೇಶದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.
ಸಭೆಯ ಅಧ್ಯಕ್ಷತೆಯನ್ನು ಉಳ್ಳಾಲ ಪುರಸಭೆ ಸಮಿತಿ ಅಧ್ಯಕ್ಷ ಪದ್ಮಾವತಿ.ಯಸ್ ಶೆಟ್ಟಿ ವಹಿಸಿದ್ದರು. ನಿವೇಶನ ರಹಿತರ ಉಳ್ಳಾಲ ಹೋರಾಟ ಸಮಿತಿ ಅಧ್ಯಕ್ಷ ಕೃಷ್ಣಪ್ಪ ಸಾಲ್ಯಾನ್, ಮುಖಂಡರುಗಳಾದ ವಿಲಾಸಿನಿ ತೊಕ್ಕೊಟ್ಟು, ರೋಹಿದಾಸ್ ಭಟ್ನಗರ, ಆಯಿಷಾ ಉಳ್ಳಾಲ ಉಪಸ್ಥಿತರಿದ್ದರು. ವಿಲಾಸಿನಿ ತೊಕ್ಕೊಟ್ಟು ವಂದಿಸಿದರು.