UN NETWORKS
ಮಂಗಳೂರು: ನಗರದ ಉರ್ವ ಮಾರಿಗುಡಿ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದರೆಂಬ ಆರೋಪದಲ್ಲಿ ನಾಲ್ವರು ಯುವಕರನ್ನು ಉರ್ವ ಪೊಲೀಸರು ಬಂಧಿಸಿ, ಬಂಧಿತರಿಂದ ಒಟ್ಟು 1.5 ಕಿ.ಗ್ರಾಂ ಗಾಂಜಾ, 4 ಮೊಬೈಲ್ ಫೋನ್ ಹಾಗೂ ನಗದು ಸೇರಿದಂತೆ ಒಟ್ಟು 55,000 ರೂ. ಮೊತ್ತದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ಬಂಧಿತರ ಮೇಲೆ ಎನ್ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಪೊಲೀಸ್ ಆಯುಕ್ತ ಟಿ.ಆರ್, ಸುರೇಶ್, ಡಿಸಿಪಿಗಳಾದ ಹನು ಮಂತರಾಯ ಹಾಗೂ ಉಮಾ ಪ್ರಶಾಂತ್, ಕೇಂದ್ರ ಉಪವಿಭಾಗದ ಎಸಿಪಿ ಉದಯ್ ನಾಯಕ್ ಮಾರ್ಗ ದರ್ಶನದಂತೆ ಉರ್ವ ಠಾಣೆಯ ಅಧಿಕಾರಿ ಹಾಗೂ ಸಿಬಂದಿ ಈ ಕಾರ್ಯಾಚರಣೆ ನಡೆಸಿದ್ದರು.