UN NETWORKS
ಉಳ್ಳಾಲ: ಕೇಸರಿ ಮಿತ್ರ ವೃಂದ ಸೇವಾ ಟ್ರಸ್ಟ್ ಕುಂಪಲ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಸೋಮೇಶ್ವರ ಗ್ರಾಮ ಪಂಚಾಯತ್ ಇದರ ಸಹಯೋಗದಲ್ಲಿ ನಮ್ಮ ತ್ಯಾಜ್ಯ ನಮ್ಮ ಹೊಣೆ ಕಾರ್ಯಕ್ರಮದಡಿಯಲ್ಲಿ ಸೋಮೇಶ್ವರ ದೇವಸ್ಥಾನದ ಪರಿಸರದಲ್ಲಿ ಸ್ವಚ್ಚತಾ ಕಾರ್ಯಕ್ರಮ ಮತ್ತು ವನಮಹೋತ್ಸವದ ಅಂಗವಾಗಿ ಗಿಡ ನೆಡುವ ಕಾರ್ಯಕ್ರಮ ಆದಿತ್ಯವಾರ ನಡೆಯಿತು.
ಈ ಸಂದರ್ಭದಲ್ಲಿ ಸೋಮೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರರಾದ ವಿಶ್ವನಾಥ ಗಟ್ಟಿ ವಗ್ಗ, ಕೇಸರಿ ಸೇವಾ ಟ್ರಸ್ಟ್ ನ ಅಧ್ಯಕ್ಷರದ ನವೀನ್ ಕುಜುಮಗದ್ದೆ, ಎಲ್ಲಾ ಟ್ರಸ್ಟಿಗಳು, ವೃಂದದ ಪದಾ„ಕಾರಿಗಳು, ವೃಂದದ ಸದಸ್ಯರು, ಗ್ರಾಮ ಪಂಚಾಯತ್ ಅಭಿವೃದ್ಧಿ ಅ„ಕಾರಿ, ಗ್ರಾಮ ಪಂಚಾಯತ್ ನೌಕರರು ಜಿಲ್ಲಾ ಪಂಚಾಯತ್ ನೌಕರರು ಉಪಸ್ಥಿತರಿದ್ದು ಸ್ವಚ್ಛತಾ ಮತ್ತು ಗಿಡ ನೆಡುವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.