ಉಳ್ಳಾಲ: ಜೈ ಶಕ್ತಿ ಮಿತ್ರಮಂಡಳಿಯ ಅಧ್ಯಕ್ಷರಾಗಿ ಹರೀಶ್ ಇರಾ ಆಯ್ಕೆಯಾಗಿದ್ದಾರೆ.2018-19ರ ಸಾಲಿನ ವಾರ್ಷಿಕ ಮಹಾಸಭೆಯಲ್ಲಿ ಸಂಘದ ಅಧ್ಯಕ್ಷ ಪ್ರಶಾಂತ್ ಶೆಟ್ಟಿ ಇವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆಮಾಡಲಾಯಿತು.
ಗೌರವಾಧ್ಯಕ್ಷರಾಗಿ ನಾಗೇಶ್ ಪೂಜಾರಿ, ಉಪಾಧ್ಯಕ್ಷರಾಗಿ ಪುಷ್ಪರಾಜ್, ಯತಿರಾಜ್ ಎ, ಕಾರ್ಯದರ್ಶಿಯಾಗಿ ಅನಿಲ್ ಕುಮಾರ್ ಸೈಟ್, ಜೊತೆ ಕಾರ್ಯದರ್ಶಿಯಾಗಿ ಜಯಪ್ರಕಾಶ್, ಕೋಶಾಧಿಕಾರಿಯಾಗಿ ತಾರಾನಾಥ ಆಚೆಬೈಲ್, ಕ್ರೀಡಾ ಕಾರ್ಯದರ್ಶಿಯಾಗಿ ಶಿವರಾಜ್, ರಂಜಿತ್, ಸಂಘಟನಾ ಕಾರ್ಯದರ್ಶಿಯಾಗಿ ಜಯರಾಜ್, ಕೀರ್ತಿ, ಸಾಂಸ್ಕೃತಿಕಾ ಕಾರ್ಯದರ್ಶಿಯಾಗಿ ಹರೀಶ್, ಹರ್ಷಿ ಇವರುಗಳನ್ನು ಆಯ್ಕೆಮಾಡಲಾಯಿತು.


