Site icon Ullalavani

ವಿದ್ಯಾರ್ಥಿ ಪರಿಷತ್‍ನಿಂದ ನಾಯಕತ್ವ ಗುಣ ಬೆಳಸಲು ಪೂರಕ : ಚೇತನಾ ಅಜಿತ್ ಕುಮಾರ್

UN NETWORKS

ತಲಪಾಡಿ: ವಿದ್ಯಾರ್ಥಿ ಜೀವನದಲ್ಲಿ ನಾಯಕತ್ವ ಗುಣವನ್ನು ಬೆಳೆಸಿಕೊಳ್ಳುವುದರೊಂದಿಗೆ ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಗೆ ಇಂತಹ ಕಾರ್ಯಕ್ರಮಗಳು ಪೂರಕ ಎಂದು ಮಹೇಶ್ ಪದವಿ ಪೂರ್ವ ಕಾಲೇಜಿನ ಸಸ್ಯಶಾಸ್ರ ವಿಭಾಗದ ಉಪನ್ಯಾಸಕಿ ಚೇತನಾ ಅಜಿತ್ ಕುಮಾರ್ ಅಭಿಪ್ರಾಯಪಟ್ಟರು. ’

ತಲಪಾಡಿ ದೇವಿನಗರದ ಶಾರದಾ ವಿದ್ಯಾನಿಕೇತನ ಪಬ್ಲಿಕ್ ಸ್ಕೂಲ್‍ನಲ್ಲಿ ಶಾಲಾ ಪರಿಷತ್ ಉದ್ಘಾಟನಾ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು. ಶಾರದಾ ವಿದ್ಯಾನಿಕೇತನ ಪಬ್ಲಿಕ್ ಸ್ಕೂಲ್ ನ ಪ್ರಾಂಶುಪಾಲೆ ಸುಷ್ಮಾ ದಿನಕರ್ ಮಾತನಾಡಿ ಶಾಲಾ ವಿದ್ಯಾರ್ಥಿ ನಾಯಕರು ಶಾಲೆಯ ನಿಯಮಗಳನ್ನು ಪಾಲಿಸುವುದರೊಂದಿಗೆ ತಮ್ಮ ಕಿರಿಯ ವಿದ್ಯಾರ್ಥಿಗಳಿಗೆ ಮಾದರಿಯಾಗಿ ಮಾರ್ಗದರ್ಶನವನ್ನು ನೀಡುವ ಕಾರ್ಯವನ್ನು ಮಾಡಬೇಕು.

ಶಾರಾದಾ ವಿದ್ಯಾನಿಕೇತನ ಡೇ ಸ್ಕೂಲ್ ನ ಪ್ರಾಂಶುಪಾಲೆ ಲತಾಂಜಲಿ ರೈ ವಿದ್ಯಾರ್ಥಿ ಪರಿಷತ್‍ನ ಸದಸ್ಯರಿಗೆ ಪ್ರಮಾಣ ವಚನ ಬೋಧಿಸಿದರು. ವಿದ್ಯಾನಿಕೇತನ ಪಬ್ಲಿಕ್ ಸ್ಕೂಲ್ ವಸತಿ ಶಾಲೆಯ ಉಪ ಪ್ರಾಂಶುಪಾಲ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ವಿನಾಯಕ್ ಬಿ.ಜಿ. ಉಪಸ್ಥಿತರಿದ್ದರು.ವಿದ್ಯಾರ್ಥಿಗಳಾದ ವೈಷ್ಣವಿ ಸ್ವಾಗತಿಸಿದರು. ಲಕ್ಷ್ಮಿಬೋಳಾರ್ ಕಾರ್ಯಕ್ರಮ ನಿರೂಪಿಸಿದರು. ಯುಕ್ತಾ ಭಾಗವತ್ ವಂದಿಸಿದರು.

Exit mobile version