UN NETWORKS
ತಲಪಾಡಿ: ವಿದ್ಯಾರ್ಥಿ ಜೀವನದಲ್ಲಿ ನಾಯಕತ್ವ ಗುಣವನ್ನು ಬೆಳೆಸಿಕೊಳ್ಳುವುದರೊಂದಿಗೆ ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಗೆ ಇಂತಹ ಕಾರ್ಯಕ್ರಮಗಳು ಪೂರಕ ಎಂದು ಮಹೇಶ್ ಪದವಿ ಪೂರ್ವ ಕಾಲೇಜಿನ ಸಸ್ಯಶಾಸ್ರ ವಿಭಾಗದ ಉಪನ್ಯಾಸಕಿ ಚೇತನಾ ಅಜಿತ್ ಕುಮಾರ್ ಅಭಿಪ್ರಾಯಪಟ್ಟರು. ’
ಶಾರಾದಾ ವಿದ್ಯಾನಿಕೇತನ ಡೇ ಸ್ಕೂಲ್ ನ ಪ್ರಾಂಶುಪಾಲೆ ಲತಾಂಜಲಿ ರೈ ವಿದ್ಯಾರ್ಥಿ ಪರಿಷತ್ನ ಸದಸ್ಯರಿಗೆ ಪ್ರಮಾಣ ವಚನ ಬೋಧಿಸಿದರು. ವಿದ್ಯಾನಿಕೇತನ ಪಬ್ಲಿಕ್ ಸ್ಕೂಲ್ ವಸತಿ ಶಾಲೆಯ ಉಪ ಪ್ರಾಂಶುಪಾಲ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ವಿನಾಯಕ್ ಬಿ.ಜಿ. ಉಪಸ್ಥಿತರಿದ್ದರು.ವಿದ್ಯಾರ್ಥಿಗಳಾದ ವೈಷ್ಣವಿ ಸ್ವಾಗತಿಸಿದರು. ಲಕ್ಷ್ಮಿಬೋಳಾರ್ ಕಾರ್ಯಕ್ರಮ ನಿರೂಪಿಸಿದರು. ಯುಕ್ತಾ ಭಾಗವತ್ ವಂದಿಸಿದರು.