ಮಂಗಳೂರು: ಹಿಂದೂ ಯುವ ಸೇನಾ ಆಶ್ರಯದಲ್ಲಿ ನಡೆಯುವ ಮಂಗಳೂರು ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾಗಿ 25ನೇ ಭಾರಿಗೆ ಕಲ್ಪನಾ ಸ್ವೀಟ್ಸ್ ನ ಪಾಲುದಾರ ಶಶಿಕಾಂತ್ ನಾಗ್ವೇಕರ್ ಆಯ್ಕೆಯಾಗಿದ್ದಾರೆ.ಹಿಂದೂ ಯುವ ಸೇನಾ ಆಶ್ರಯದಲ್ಲಿ ಮಂಗಳೂರಿನ ಕೇಂದ್ರ ಮೈದಾನದಲ್ಲಿ ಆಚರಿಸಲ್ಪಡುವ 26ನೇ ವರ್ಷದ ಮಂಗಳೂರು ಗಣೇಶೋತ್ಸವ ಸಮಿತಿಯ ಮಹಾಸಭೆಯು ಹಿಂದೂ ಯುವ ಸೇನಾ ಅಧ್ಯಕ್ಷ ಯಶೋದರ ಚೌಟ ಇವರ ಅಧ್ಯಕ್ಷತೆಯಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆಮಾಡಲಾಯಿತು.