UN NETWORKS
ತಲಪಾಡಿ: ವಿದ್ಯಾರ್ಥಿಗಳು ಎಳೆವಯಸ್ಸಿನಲ್ಲಿಯೇ ಸಮಾಜ ಸೇವೆಯಂತಹ ಉನ್ನತ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿ, ಸಮಾಜದ ಬೆಳವಣಿಗೆಯಲ್ಲಿ ಕಾರ್ಯ ಪ್ರವೃತ್ತರಾಗಬೇಕು ಎಂದು ಮಂಗಳೂರು ರೋಟರಿ ಕ್ಲಬ್ನ ಅಧ್ಯಕ್ಷ ಡಾ| ವಸಂತ್ ಪೈ ಅವರು ಅಭಿಪ್ರಾಯಪಟ್ಟರು. ಅವರು ತಲಪಾಡಿಯ ಶಾರದಾ ವಿದ್ಯಾನಿಕೇತನ ಪಬ್ಲಿಕ್ ಸ್ಕೂಲ್ನಲ್ಲಿ ನಡೆದ ವನಮಹೋತ್ಸವ ಹಾಗೂ ಇಂಟರಾಕ್ಟ್ ಕ್ಲಬ್ನ ಪದಗ್ರಹಣ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ, ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಶಾಲಾ ಪ್ರಾಂಶುಪಾಲೆ ಸುಷ್ಮಾ ದಿನಕರ್, ಉಪಪ್ರಾಂಶುಪಾಲ ಮೋಹನ್ದಾಸ್, ರೊಟೇರಿಯನ್ಗಳಾದ ರಾಘವೇಂದ್ರ ಭಟ್, ವಿನೋದ್ ಡಿ’ಸೋಜ ಉಪಸ್ಥಿತರಿದ್ದರು, ಇಂಟರಾಕ್ಟ್ ಕ್ಲಬ್ನ ಪದಗ್ರಹಣ ಕಾರ್ಯಕ್ರಮವನ್ನು ನೆರವೇರಿಸಿದರು.
ವಿದ್ಯಾರ್ಥಿಗಳು ಪರಿಸರ ಜಾಗೃತಿಯನ್ನು ಸಾರುವ ಹಲವಾರು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಈ ಸಂದರ್ಭದಲ್ಲಿ ಪ್ರಸ್ತುತ ಪಡಿಸಿದರು ಹಾಗೂ ರೋಟರಿ ಕ್ಲಬ್ನವರು ನೀಡಿದ ವಿವಿಧ ಜಾತಿಯ ನೂರು ಗಿಡಗಳನ್ನು ಶಾಲೆಯ ಆವರಣದಲ್ಲಿ ನೆಟ್ಟು, ಅದನ್ನು ಪೋಷಿಸಿ ಸಂರಕ್ಷಿಸುವ ಸಂಕಲ್ಪ ಕೈಗೊಂಡರು.
ಕುಮಾರಿ ಭೂಮಿಕ ಮತ್ತು ಸೃಷ್ಠಿ ಕಾರ್ಯಕ್ರಮ ನಿರೂಪಿಸಿದರು. ಶಾಲಾ ಪ್ರಾಂಶುಪಾಲೆ ಸುಷ್ಮಾ ದಿನ್ಕರ್ ಸ್ವಾಗತಿಸಿದರು, ಗಣಿತ ಶಿಕ್ಷಕಿ ಲಿಜಿ ನಿರನ್ ವಂದಿಸಿದರು.