UN NETWORKS
ಮುಡಿಪು: ವಿದ್ಯಾರ್ಥಿ ಜೀವನದಲ್ಲಿ ಉತ್ತಮ ರೀತಿ ಸಂಸ್ಕಾರ ಬೆಳಸಿಕೊಂಡು ಬಂದರೆ ನಮ್ಮ ಜೀವನದಲ್ಲಿ ಯಶಸ್ಸು ಸಾಧ್ಯ. ವಿಧ್ಯಾರ್ಥಿಗಳು ಶಾಲಾ ದಿನಗಳಲ್ಲಿ ವಿದ್ಯಾರ್ಥಿ ಪರಿಷತ್ಗಳಲ್ಲಿ ತೊಡಗಿಸಿಕೊಂಡರೆ ನಾಯಕತ್ವ ಗುಣ ಬೆಳೆಯಲು ಸಾಧ್ಯ ಎಂದು ದ.ಕ ಪೋಲಿಸ್ ವರಿಷ್ಠಾಧಿಕಾರಿ ಡಾ| ಬಿ.ಆರ್ ರವಿಕಾಂತ್ ಗೌಡ ಅಭಿಪ್ರಾಯಪಟ್ಟರು.
ವಿದ್ಯಾರ್ಥಿ ಪರಿಷತ್ ನೂತನ ತಂಡಗಳ ಗುರುತಿನ ಗೌರವದ ಧ್ವಜವನ್ನು ತಂಡದ ನಾಯಕರಿಗೆ ಹಸ್ತಾಂತರಿಸಲಾಯಿತು.
ಕಾರ್ಯಕ್ರಮದಲ್ಲಿ ಪೋಲಿಸ್ ವರಿಷ್ಠಾಧಿಕಾರಿ ಡಾ| ಬಿ.ಆರ್. ರವಿಕಾಂತ್ ಗೌಡರವರನ್ನು ಸೂರಜ್ ಸಮೂಹ ಸಂಸ್ಥೆ ವತಿಯಿಂದ ಸನ್ಮಾನಿಸಲಾಯಿತು.ಶಾಲಾ ಮುಖ್ಯ ಶಿಕ್ಷಕಿ ವಿಮಲಾ ಶೆಟ್ಟಿ ಸ್ವಾಗತಿಸಿದರು. ಶಿಕ್ಷಕ ಅಶೋಕ್ ಎಸ್. ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕಿ ದಿವ್ಯ ವಂದಿಸಿದರು.