Site icon Ullalavani

ಯಾವುದೇ ಸ್ಪರ್ಧೆಗಳಲ್ಲಿ ಪ್ರಶಸ್ತಿಗಿಂತ ಪಾಲ್ಗೊಳ್ಳುವಿಕೆ ಅತೀ ಅಗತ್ಯ :ರಾಜೇಶ್ವರೀ

UN NETWORKS

ಉಳ್ಳಾಲ: ಯಾವುದೇ  ಸ್ಪರ್ಧೆಗಳಲ್ಲಿ ಪ್ರಶಸ್ತಿಗಿಂತ ಪಾಲ್ಗೊಳ್ಳುವಿಕೆ ಅತೀ ಅಗತ್ಯ. ಸೋಲು ಗೆಲುವನ್ನು ಒಂದೇ ರೀತಿಯಲ್ಲಿ ಸ್ವೀಕರಿಸುವ ಮನೋಭಾವ ಬೆಳೆಸಿಕೊಂಡರೆ ಇಂದಿನ ಸೋಲು ಮುಂದಿನ ಗೆಲುವಿಗೆ ಹಾದಿಯಾಗಲಿದೆ ಎಂದು ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿ ರಾಜೇಶ್ವರೀ ಅಭಿಪ್ರಾಯಪಟ್ಟರು.

ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಮಂಗಳೂರು ದಕ್ಷಿಣ, ಕ್ಷೇತ್ರ ಸಂಪನ್ಮೂಲ ಕೇಂದ್ರ, ಮಂಗಳೂರು ದಕ್ಷಿಣ, ಸಮೂಹ ಸಂಪನ್ಮೂಲ ಕೇಂದ್ರ ದೇರಳಕಟ್ಟೆ ಹಾಗೂ ವಿದ್ಯಾರತ್ನ ಆಂಗ್ಲ ಮಾಧ್ಯಮ ಶಾಲೆ ದೇರಳಕಟ್ಟೆ ಇವರ ಸಹಯೋಗದೊಂದಿಗೆ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಕಲ್ಲೇಕಾರುಗುತ್ತು ರತ್ನಾವತಿ ಕೊರಗಪ್ಪ ಶೆಟ್ಟಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಶಾಲಾ ಮುಖ್ಯೋಪಾಧ್ಯಾಯಿನಿ ನಯೀಮ್ ಹಮೀದ್, ಉಪಸ್ಥಿತರಿದ್ದರು.ವಿದ್ಯಾರತ್ನ ಆಂಗ್ಲ ಮಾಧ್ಯಮ ಶಾಲೆಯ ಆಡಳಿತ ನಿರ್ದೇಶಕ ಕೆ.ರವೀಂದ್ರ ಶೆಟ್ಟಿ ಉಳಿದೊಟ್ಟು ಸ್ವಾಗತಿಸಿದರು. ಶಿಕ್ಷಕ ರವಿ ಕುಮಾರ್ ಕೋಡಿ ಕಾರ್ಯಕ್ರಮ ನಿರ್ವಹಿಸಿದರು. ಶಾಲಾ ಸಂಚಾಲಕಿ ಸೌಮ್ಯ ಆರ್ ಶೆಟ್ಟಿ ವಂದಿಸಿದರು.

Exit mobile version