UN NETWORKS
ಉಳ್ಳಾಲ: ಕೊಡಗಿನಲ್ಲಿ ಆಗಿರುವ ಪ್ರಾಕೃತಿಕ ವಿಕೋಪದ ಸಂತ್ರಸ್ತರ ಜತಗೆ ನಾವಿದ್ದೇವೆ. ಎಲ್ಲಾ ಧರ್ಮದವರು ತಮ್ಮ ಆರಾಧನಾಲಯಗಳಲ್ಲಿ ಧರ್ಮ ನೋಡದೆ ಆಶ್ರಯ ನೀಡಿರುವುದು ರಾಜ್ಯದ ಜನತೆಯ ಮಾನವೀಯತೆಗೆ ಹಿಡಿದ ಕೈಗನ್ನಡಿಯಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ ಹೇಳಿದ್ದಾರೆ.
ಮಂಗಳೂರು ಪೊಲೀಸ್ ಕಮೀಷನರ್ ಟಿ.ಆರ್.ಸುರೇಶ್ ಮಾತನಾಡಿ ಮಂಗಳೂರು ಪೊಲೀಸ್ ಕಮೀಷನರ್ ಟಿ.ಆರ್ ಸುರೇಶ್ ಮಾತನಾಡಿ ಮುಸ್ಲಿಂ ಬಾಂಧವರು ಬಕ್ರೀದ್ ಹಬ್ಬದ ಪ್ರಯುಕ್ತ ಸರ್ವಧರ್ಮದ ಒಳಿತಿಗಾಗಿ ವಿಶೇಷ ಪ್ರಾರ್ಥನೆಯನ್ನು ಸಲ್ಲಿಸುತ್ತಾರೆ. ಈ ಮೂಲಕ ಸೌಹಾರ್ದತೆಯನ್ನು ಕಾಪಾಡುವ ಕೆಲಸವಾಗಿದೆ. ತ್ಯಾಗ, ಬಲಿದಾನದ ಸಂಕೇತವಾಗಿರುವ ಹಬ್ಬವನ್ನು ನಾಡಿಗೆ ಒಳಿತನ್ನು ಕರುಣಿಸಲಿ ಎಂದು ಶುಭಹಾರೈಸಿದರು.
ಖತೀಬರಾದ ಅಝೀಝ್ ಬಾಖವಿ ದುಆ ನೆರವೇರಿಸಿದರು. ಉಳ್ಳಾಲ ದರ್ಗಾ ಸಮಿತಿ ಅಧ್ಯಕ್ಷ ಅಬ್ದುಲ್ ರಶೀದ್, ದರ್ಗಾ ಚಾರಿಟೇಬಲ್ ಟ್ರಸ್ಟ್ ಉಪಾಧ್ಯಕ್ಷ ಮುಸ್ತಾಫ ಅಬ್ದುಲ್ಲಾ, ಅರೆಬಿಕ್ ಟ್ರಸ್ಟ್ ಕಾರ್ಯದರ್ಶಿ ಆಸೀಫ್ ಅಬ್ದುಲ್ಲಾ, ಖಜಾಂಚಿ ಇಲ್ಯಾಸ್, ನಗರಸಭೆ ಸದಸ್ಯ ಬಾಝಿಲ್ ಡಿಸೋಜ, ಇಬ್ರಾಹಿಂ ಕಕ್ಕೆತೋಟ, ಅಮೀರ್ ಹಾಜಿ, ಯು.ಟಿ.ಇಲ್ಯಾಸ್, ತ್ವಾಹ ಹಾಜಿ, ಆಝಾದ್ ಇಸ್ಮಾಯಿಲ್, ಮುಸ್ತಾಫ ಮಂಚಿಲ, ಕೆ.ಎನ್.ಮೆಹಮೂದ್. ಇಬ್ರಾಹಿಂ ಉಳ್ಳಾಲಬೈಲ್ ಮುಸ್ತಾಫ ಉಪಸ್ಥಿತರಿದ್ದರು.