UN NETWORKS
ಮುಂಬಯಿ: ಅಸೋಸಿಯೇಶನ್ ಆಫ್ ಕನ್ನಡ ಕೂಟ’ಸ್ ಆಫ್ ಅಮೇರಿಕಾ ಸಂಸ್ಥೆಯು ಉತ್ತರಟೆಕ್ಸಾಸ್ ಮಲ್ಲಿಗೆ ಕನ್ನಡ ಕೂಟ ಇದರ ಆಶ್ರಯದಲ್ಲಿ ಇತ್ತೀಚೆಗೆ ಅಮೆರಿಕದ ಡಾಲಸ್ ನಗರದ ಶೆರಟಾನ್ ಸಮಾವೇಶ ಸಭಾಗೃಹದಲ್ಲಿ ಆಯೋಜಿಸಿದ್ದ ತ್ರಿದಿನಗಳಲ್ಲಿ10ನೇ ಅಕ್ಕ ವಿಶ್ವಕನ್ನಡ ಸಮ್ಮೇಳನಕ್ಕೆ ಮುಂಬಯಿನ ಪ್ರತಿಷ್ಠಿತ ಕವಿಯಾಗಿ ಗುರುತಿಸಿಕೊಂಡು ಸಮ್ಮೇಳನಕ್ಕೆ ಆಹ್ವಾನಿತ ಕನ್ನಡದ ಸಂವೇದನಾ ಶೀಲ ಕವಿ ಗೋಪಾಲ ತ್ರಾಸಿ ನಾಡಿನ ಹೆಸರಾಂತ ಕವಿ ಜಯಂತ್ ಕಾಯ್ಕಿಣಿ ಅಧ್ಯಕ್ಷತೆಯಲ್ಲಿ ಜರಗಿದ `ಶ್ರಾವಣ ಮಧ್ಯಾಹ್ನ-ಅಕ್ಕ2018 ಕವಿಗೋಷ್ಠಿ’ಯಲ್ಲಿತನ್ನ ಹುಣ್ಣಿಮೆ-ಅಭಗ್ನ ಹಾಗೂ ಹೋಳಿ ಎಂಬ ಎರಡು ಕವಿತೆಗಳನ್ನು ಪ್ರಸ್ತುತ ಪಡಿಸಿದರು.
ಕನ್ನಡಿಗ ಪತ್ರಕರ್ತರ ಸಂಘ ಮಹಾರಾಷ್ಟ್ರ ಸಂಸ್ಥೆಯ ಸದಸ್ಯರೂ ಮತ್ತು ಕ್ರೀಡಾಪಟು ಆಗಿರುವ ತ್ರಾಸಿ ಉಡುಪಿ ಜಿಲ್ಲೆಯ ಕುಂದಾಪುರ ಭರಣಿಮನೆ ಲಿಂಗ ಪೂಜಾರಿ ಉಪ್ಪಿನಕುದುರು ಮತ್ತು ಹೊಸೊಕ್ಲು ಮನೆಮುತ್ತು ಪೂಜಾರಿ ತ್ರಾಸಿ ಸುಪುತ್ರರಾಗಿದ್ದು, ಪತ್ನಿ ಸವಿತಾ ಗೋಪಾಲ್, ಮಕ್ಕಳಾದ ಮಾ| ಧ್ರುವ ಹಾಗೂ ಕು|ಅಪೂರ್ವ ಅವರೊಂದಿಗೆ ಮುಂಬಯಿ ಉಪನಗರ ಕಾಂದಿವಿಲಿ ಪಶ್ಚಿಮದ ಚಾರ್ಕೋಪ್ನಲ್ಲಿ ವಾಸವಾಗಿದ್ದಾರೆ.