UN NETWORKS
ಉಳ್ಳಾಲ: ಕನ್ನಡ ಭಾಷೆ ಕೆಳ ಮಟ್ಟದ್ದಾಗಬಾರದು ಎನ್ನುವ ನೆಲೆಯಲ್ಲಿ ನಿಟ್ಟೆ ವಿಶ್ವವಿದ್ಯಾಲಯ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ ಎಂದು ನಿಟ್ಟೆ ವಿಶ್ವವಿದ್ಯಾಲಯದ ಕುಲಪತಿ ಡಾ.ಸತೀಶ್ ಕುಮಾರ್ ಭಂಡಾರಿ ಹೇಳಿದರು.
ಕಾರ್ಯಕ್ರಮದಲ್ಲಿ ಸಾಹಿತಿ ಡಾ.ಶಿವಾನಂದ ಪ್ರಭು, ನಿಟ್ಟೆ ವಿವಿ ಕುಲಸಚಿವೆ ಡಾ.ಇಂದ್ರಾಣಿ ಕರುಣಾಸಾಗರ್, ಕೆ.ಎಸ್.ಹೆಗ್ಡೆ ವೈದ್ಯಕೀಯ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ಶಿವಕುಮಾರ್ ಹಿರೇಮಠ, ಕ್ಷೇಮಾ ವೈಸ್ ಡೀನ್ ಡಾ.ಪಿ.ಎಸ್. ಪ್ರಕಾಶ್, ಡಾ.ಜೆ.ಪಿ.ಶೆಟ್ಟಿ, ಎ.ಬಿ.ಶೆಟ್ಟಿ ದಂತ ಮಹಾವಿದ್ಯಾಲಯದ ಡೀನ್ ಡಾ.ಯು.ಎಸ್.ಕೃಷ್ಣ ನಾಯಕ್ ಮೊದಲಾದವರು ಉಪಸ್ಥಿತರಿದ್ದರು.ಡಾ.ಸುಮಲತಾ ಶೆಟ್ಟಿ ಸ್ವಾಗತಿಸಿದರು. ಯಶೋಧ ಕಾರ್ಯಕ್ರಮ ನಿರೂಪಿಸಿದರು.ಇದೇ ಸಂದರ್ಭ 40 ಮಂದಿ ವಿದ್ಯಾರ್ಥಿಗಳು ಸೇರಿಕೊಂಡು ನಾಡಗೀತೆಯನ್ನು ಸಾಮೂಹಿಕವಾಗಿ ಹಾಡಿದರು.