UN NETWORKS
ನರಿಂಗಾನ: ನರಿಂಗಾನದ ಯೇನೆಪೋಯ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ರಾಷ್ಟ್ರೀಯ ಆಯುರ್ವೇದ ದಿನಾಚರಣೆ ನಡೆಯಿತು.
ಆಸ್ಪತ್ರೆಯ ಮರ್ಮ ಚಿಕಿತ್ಸಾ ವಿಭಾಗವನ್ನು ನರಿಂಗಾನ ಗ್ರಾಮ ಪಂಚಾಯಿತಿ ಅಧ್ಯಕ್ಷ ಇಸ್ಮಾಯಿಲ್ ಮೀನಂಕೋಡಿ ಉದ್ಘಾಟಿಸಿದರು.
ಪ್ರಥಮ ವರ್ಷದ ಬಿ.ಎ.ಎಂ.ಎಸ್ ವಿದ್ಯಾರ್ಥಿಗಳಿಗೆ ಶಿಷ್ಯೋಪನಯನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ಯೇನೆಪೋಯ ಸಂಸ್ಥೆಯ ಉಪ ಕುಲಪತಿ ಡಾ. ಸಿ. ವಿ. ರಘುವೀರ್ ಹಾಗೂ ಯೇನೆಪೊಯ ಹೋಮಿಯೋಪತಿ ಆಸ್ಪತ್ರೆ ಮತ್ತು ಕಾಲೇಜಿನ ಡೀನ್ ಡಾ.ವಿ.ವಿ. ವರ್ಣೆಕರ್ ಉಪಸ್ಥಿತರಿದ್ದರು. ಕಾರ್ಯಕ್ರಮದ ಅಂಗವಾಗಿ ವಿದಾರ್ಥಿಗಳು ಕ್ಯಾಂಪಸ್ ಪರಿಸರದಲ್ಲಿ ಆಯುರ್ವೇದ ಗಿಡಮೂಲಿಕೆಗಳನ್ನು ನೆಟ್ಟರು.