UN NETWORKS
ಇರಾ: ಇರಾ ಕುಂಡಾವು ಕಲ್ಲಾಡಿ ವಿಠಲ ಶೆಟ್ಟಿ ಸೇವಾ ಟ್ರಸ್ಟ್ ವತಿಯಿಂದ ಕಲ್ಲಾಡಿ ವಿಠಲ ಶೆಟ್ಟಿ ಸಂಸ್ಮರಣೆ ಹಾಗೂ ಯಕ್ಷಗಾನ, ಸನ್ಮಾನ ಕಾರ್ಯಕ್ರಮ ಇರಾ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಬಯಲು ರಂಗಮಂದಿರದಲ್ಲಿ ಭಾನುವಾರ ನಡೆಯಿತು.
ಟ್ರಸ್ಟ್ ಅಧ್ಯಕ್ಷ ಇರಾಗುತ್ತು ಜಗದೀಶ್ ಶೆಟ್ಟಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಪುಷ್ಪರಾಜ ಕುಕ್ಕಾಜೆ ಕಾರ್ಯಕ್ರಮ ನಿರೂಪಿಸಿದರು.
ಪತ್ರಕರ್ತ ಸುರೇಶ್ ಕೊಟ್ಟಾರಿ ಸನ್ಮಾನ ಪತ್ರ ವಾಚಿಸಿದರು. ಜಯರಾಮ ಪೂಜಾರಿ ವಂದಿಸಿದರು. ಬಳಿಕ ಬಡಗುತಿಟ್ಟಿನ ಖ್ಯಾತ ಕಲಾವಿದರ ಕೂಡುವಿಕೆಯಿಂದ ಮಾರುತಿ ಪ್ರತಾಪ ಯಕ್ಷಗಾನ ಬಯಲಾಟ ಪ್ರದರ್ಶನ ನಡೆಯಿತು.