UN NETWORKS
ದೇರಳಕಟ್ಟೆ: ಮಂಗಳೂರು ವಿಧಾನಸಭಾ ಕ್ಷೇತ್ರದ ಬೆಳ್ಮ ಗ್ರಾಮದ ದೇರಳಕಟ್ಟೆ-ಕಾನೆಕೆರೆ ಪ್ರದೇಶದ ಗಂಭೀರ ಸಮಸ್ಯೆಗಳಾದ ಬಹುಮಹಡಿ ವಸತಿ, ವಾಣಿಜ್ಯ ಸಂಕೀರ್ಣಗಳಿಂದ ಅವೈಜ್ಞಾನಿಕ ಡ್ರೈನೇಜ್ ಸಮಸ್ಯೆಗಳಿಂದಾಗಿ ಹೊರಡುವ ಮಲಿನ ನೀರು, ದುರ್ನಾತಯುತ ತ್ಯಾಜ್ಯಗಳನ್ನು ತೆರೆದ ಕೆರೆ ಮತ್ತು ಬಾವಿಯಲ್ಲಿ ಶೇಕರಿಸುತ್ತಿರುವ ದುರವಸ್ಥೆ, ಸ್ಥಳೀಯ ಕೆಲವು ನಿವಾಸಿಗಳ ಬಾವಿಯಲ್ಲಿ ಉರಿಸಾಧ್ಯವಾದ ತೈಲ ಅಂಶ ಪತ್ತೆ, ಕೆಲವು ನಿರ್ದಿಷ್ಟ ಮನೆಗಳಿಗೆ ಕುಡಿಯುವ ನೀರಿನ ಪೂರೈಕೆಯಲ್ಲಿ ವ್ಯತ್ಯಯ, ನಿರ್ಮಾಣ ಪೂರ್ವ ನೀತಿ ನಿಯಮಗಳನ್ನು ಪಾಲಿಸದೆ ಕಟ್ಟಡ ನಿರ್ಮಾಣಗಳ ಅವ್ಯವಸ್ಥೆ.
ಭೇಟಿ ನೀಡಿದ ನಿಯೋಗದಲ್ಲಿ ಸ್ಥಳೀಯರಾದ ಮಹಮ್ಮದ್ ಫಾರೂಕ್ ಕಾನೆಕೆರೆ, ಸುಬ್ರಮಣ್ಯ ಭಟ್ ಕಾನೆಕೆರೆ, ಎಸ್.ಡಿ.ಪಿ.ಐ ಮಂಗಳೂರು ಕ್ಷೇತ್ರ ಅಧ್ಯಕ್ಷ ಅಬ್ಬಾಸ್ ಕಿನ್ಯ, ಜಿಲ್ಲಾ ಉಪಾಧ್ಯಕ್ಷ ಆಂಟನಿ ಪಿ.ಡಿ, ಸ್ಥಳೀಯರಾದ ರಾಮಚಂದ್ರ ಭಟ್ ಗುಣಾಜೆ, ನವಾಜ್ ಕಾನೆಕೆರೆ, ಎಸ್.ಡಿ.ಪಿ.ಐ ಜಿಲ್ಲಾ ಕಾರ್ಯದರ್ಶಿ ಅಶ್ರಫ್ ಮಂಚಿ, ಎಸ್.ಡಿ.ಪಿ.ಐ ಜಿಲ್ಲಾ ಸಮಿತಿ ಸದಸ್ಯ ಝಾಹೀದ್ ಮಲಾರ್, ಎಸ್.ಡಿ.ಪಿ.ಐ ಬೆಳ್ಮ ಸಮಿತಿ ಅಧ್ಯಕ್ಷ ಇರ್ಫಾನ್ ಬರುವ, ಉಸ್ಮಾನ್ ಕಾನೆಕೆರೆ, ಇರ್ಷಾದ್ ಇಸ್ಮಾಯಿಲ್, ಹಸನ್ ರಾಯಲ್ ದೇರ್ಲಕಟ್ಟೆ, ಸಲಾಂ ಕಾನೆಕೆರೆ ಉಪಸ್ಥಿತರಿದ್ದರು.