UN NETWORKS
ದೇರಳಕಟ್ಟೆ: ಮಧುಮೇಹ ರೋಗಕ್ಕೆ ಚಿಕಿತ್ಸೆ ನೀಡುವುದಕ್ಕಿಂತ ಮಧುಮೇಹ ರೋಗ ಬರದ ಹಾಗೆ ಜಾಗೃತಿ ಮೂಡಿಸುವುದು ಯುವ ವೈದ್ಯರ ಕರ್ತವ್ಯವಾಗಿದ್ದು ಈ ನಿಟ್ಟಿನಲ್ಲಿ ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯ ಆಗಬೇಕು ಎಂದು ಡಾ| ಶ್ರೀಕಾಂತ್ ಆಚಾರ್ಯ ಅಭಿಪ್ರಾಯಪಟ್ಟರು.
ಕೆ.ಎಸ್. ಮೆಡಿಕಲ್ ಅಕಾಡೆಮಿಯ ವೈಸ್ ಡೀನ್ಗಳಾದ ಡಾ| ಎ.ಎಂ. ಮಿರಾಜ್ಕರ್, ಡಾ| ಜಯಪ್ರಕಾಶ್ ಶೆಟ್ಟಿ ವೈದ್ಯಕೀಯ ಅಧೀಕ್ಷಕ ಮೇಜರ್ ಡಾ| ಶಿವಕುಮಾರ್ ಹಿರೇಮಠ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.ಕಾರ್ಯಕ್ರಮದಲ್ಲಿ ಎರಡನೇ ವರ್ಷದ ಎಂಬಿಬಿಎಸ್ ವಿದ್ಯಾರ್ಥಿಗಳು ನೃತ್ಯದ ಮೂಲಕ ಜಾಗೃತಿ ಕಾರ್ಯಕ್ರಮ ನಡೆಸಿಕೊಟ್ಟರು. ಕ್ಷೇಮ ಕಮ್ಯುನಿಟಿ ಮೆಡಿಸಿನ್ ವಿಭಾಗ ಮುಖ್ಯಸ್ಥ ಡಾ| ಸಂಜೀವ ಬಡಿಗೇರ್ ಸ್ವಾಗತಿಸಿದರು. ಡಾ| ಶಾಂಭವಿ ಭಾರದ್ವಜ್ ಕಾರ್ಯಕ್ರಮ ನಿರ್ವಹಿಸಿದರು. ಡಾ| ರಶ್ಮಿ ಕುಂದಾಪುರ್ ವಂದಿಸಿದರು.