UN NETWORKS
ದೇರಳಕಟ್ಟೆ: ದೇರಳಕಟ್ಟೆಯ ಯೇನೆಪೊಯ ವಿಶ್ವವಿದ್ಯಾನಿಲಯದ ಯೇನೆಪೊಯ ಫಾರ್ಮಸಿ ಕಾಲೇಜು ಮತ್ತು ಸಂಶೋಧನ ಕೇಂದ್ರದಲ್ಲಿ ರಾಷ್ಟ್ರೀಯ ಔಷಧ ವಿಜ್ಞಾನ ಸಪ್ತಾಹ ಆಚರಿಸಲಾಯಿತು.
ಯೇನೆಪೊಯ ವಿಶ್ವವಿದ್ಯಾನಿಲಯದ ಕುಲಸಚಿವ ಡಾ| ಗಂಗಾಧರ ಸೋಮಾಯಾಜಿ ಕೆ. ಎಸ್. ಉಪಸ್ಥಿತರಿದ್ದರು.ಸಹಾಯಕ ಪ್ರಾಧ್ಯಾಪಕಿ ನಿಶ್ಮಿತಾ ಗ್ರೆಟ್ಟಾ ಡಿ’ಸೋಜಾ ಇವರು ರಾಷ್ಟ್ರೀಯ ಔಷಧ ವಿಜ್ಞಾನ ಸಪ್ತಾಹದ ಮಹತ್ವವನ್ನು ತಿಳಿಸಿದರು .ಯೇನೆಪೊಯ ಫಾರ್ಮಸಿ ಕಾಲೇಜು ಮತ್ತು ಸಂಶೋಧನ ಕೇಂದ್ರದ ಪ್ರಾಂಶುಪಾಲೆ ಡಾ| ಮೊಹಮ್ಮದ್ ಗುಲ್ಜಾರ್ ಅಹಮ್ಮದ್ ಸ್ವಾಗತಿಸಿದರು.ಡಾ| ಸುನಿಲ್ ಎಸ್ ಮೆಂಘಾನಿ ಅವರು ಕಾರ್ಯಕ್ರಮದ ವರದಿಯನ್ನು ವಿವರಿಸಿದರು. ಹಾಗೂ ಸಹಾಯಕ ಪ್ರಾಧ್ಯಾಪಕಿ ಸಂಧ್ಯಾ ವಿ. ವಂದಿಸಿದರು.