UN NETWORKS
ಮುಡಿಪು: ಗ್ರಾಮೀಣ ಪ್ರದೇಶದ ಬಡ ಜನರು ನೆಮ್ಮದಿಯುತ ಜೀವನ ನಡೆಸುವುದಕ್ಕಾಗಿ ರಾಜ್ಯ ಸರಕಾರವು ಬಡವರಿಗೆ ಮುಖ್ಯಮಂತ್ರಿ ಉಚಿತ ಅನಿಲ ಭಾಗ್ಯ ಯೋಜನೆಯನ್ನು ಜಾರಿಗೆ ತಂದಿದೆ. ಇದರಿಂದಾಗಿ ಎಷ್ಟೋ ಬಡ ಮಹಿಳೆಯರು ಸ್ವಾಭಿಮಾನದ ಬದುಕು ನಡೆಸುತ್ತಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ ಅವರು ಹೇಳಿದರು.
ಕಾರ್ಯಕ್ರಮದಲ್ಲಿ ಬಂಟ್ವಾಳ ತಾಲೂಕು ಪಂಚಾಯಿತಿ ಅಧ್ಯಕ್ಷರಾದ ಚಂದ್ರಹಾಸ್ ಕರ್ಕೇರ, ಮಂಗಳೂರು ತಾಲೂಕು ಪಂಚಾಯಿತಿ ಅಧ್ಯಕ್ಷರಾದ ಮಹಮ್ಮದ್ ಮೋನು, ಜಿಲ್ಲಾ ಪಂಚಾಯಿತಿ ಸದಸ್ಯೆ ಮಮತಾ ಗಟ್ಟಿ, ಮುಡಿಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪ್ರಶಾಂತ್ ಕಾಜವ, ತಾಲೂಕು ಪಂಚಾಯಿತಿ ಸದಸ್ಯ ಹೈದರ್ ಕೈರಂಗಳ, ಮುಡಿಪು ಬ್ಲಾಕ್ ಕಾಂಗ್ರೆಸ್ನ ಪ್ರಧಾನ ಕಾರ್ಯದರ್ಶಿ ಜಲೀಲ್ ಮೋಂಟುಗೋಳಿ, ನಾಸೀರ್ ನಡುಪದವು, ಪಜೀರು ಗ್ರಾಮ ಪಂಚಾಯಿತಿ ಅಧ್ಯಕ್ಷ ಸೀತಾರಾಮ ಶೆಟ್ಟಿ, ಇರಾ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಅಬ್ದುಲ್ ರಝಾಕ್ ಕುಕ್ಕಾಜೆ, ಬಶೀರ್ ಮುಡಿಪು ಮೊದಲಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.