UN NETWORKS
ಉಳ್ಳಾಲ: ಔಷಧ ವಿಜ್ಞಾನ ಕ್ಷೇತ್ರದ ವೃತ್ತಿಯಲ್ಲಿರುವ ಔಷಧ ತಜ್ಞರು ಔಷಧ ಸಂಶೋಧನೆ ಮಾಡಿ ನಿಖರ ಔಷಧ ವಿತರಿಸುವ ಇವರು ವೈದ್ಯ ಮತ್ತು ರೋಗಿಯ ಮಧ್ಯೆ ಕೊಂಡಿಯಾಗಿ ಕರ್ತವ್ಯ ಮಾಡುತ್ತಿದ್ದಾರೆ ಎಂದು ನಡುಪದವಿನ ಪಿ.ಎ. ಕಾಲೇಜ್ ಆಫ್ ಎಂಜಿನಿಯರಿಂಗ್ ಪ್ರಾಂಶುಪಾಲ ಡಾ. ಅಬ್ದುಲ್ ಶರೀಫ್ ಹೇಳಿದರು.
ಪಿ.ಎ. ಸೆಂಟರ್ ಫಾರ್ ಮ್ಯಾನೇಜ್ಮೆಂಟ್ ಸ್ಟಡೀಸ್ನ ಪ್ರಾಂಶುಪಾಲೆ ಡಾ. ಲತಾಕೃಷ್ಣನ್ ಮಾತನಾಡಿ ‘ಔಷಧ ತಜ್ಞರ ಕರ್ತವ್ಯಗಳು ಮೌಲ್ಯಯುತವಾದ ಸೇವೆಗಳ’ ಬಗ್ಗೆ ತಿಳಿಸಿ ಕಾರ್ಯಕ್ರಮಕ್ಕೆ ಶುಭಕೋರಿದರು.ವಿಶೇಷ ಉಪನ್ಯಾಸ ನೀಡಿದ ಮಂಗಳೂರಿನ ಎ.ಜೆ. ಇನ್ಸ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ನ ಅಸಿಸ್ಟೆಂಟ್ ಪ್ರೊಫೆಸರ್ ಹಾಗೂ ಫಾರ್ಮಕೋವಿಜಿಲನ್ಸ್ ಆಫ್ ಇಂಡಿಯಾದ ಸಂಯೋಜಕ ಡಾ. ಶರತ್, ಔಷಧ ವಿಜ್ಞಾನ ಕ್ಷೇತ್ರದ ಹೊಸ ಬೆಳವಣಿಗೆಗಳು, ರೋಗಿಗಳು ಅನುಸರಿಸಬೇಕಾದ ಕ್ರಮಗಳು, ಔಷಧಗಳ ಸಮರ್ಪಕ ಬಳಕೆ ಹಾಗೂ ಆರೋಗ್ಯ ಕ್ಷೇತ್ರದಲ್ಲಿ ಔಷಧ ತಜ್ಞರ ಪಾತ್ರದ ಬಗ್ಗೆ ವಿವರಿಸಿದರು.
ಪಿ.ಎ. ಫಾರ್ಮಸಿ ಕಾಲೇಜಿನ ಪ್ರಾಂಶುಪಾಲ ಡಾ. ಸಲೀಮುಲ್ಲಾ ಖಾನ್ ಸ್ವಾಗತಿಸಿ ಸಪ್ತಾಹದ ಉದ್ದೇಶವನ್ನು ತಿಳಿಸಿದರು. ಪ್ರೊ. ವಿಜೇತಾ ಪೂಜಾರಿ ಕರ್ಯಕ್ರಮ ನಿರೂಪಿಸಿದರು. ಪ್ರೊ. ನಿಶ್ಮಿತಾ ವಂದಿಸಿದರು.