UN NETWORKS
ಪಜೀರು : ಈದ್ ಮಿಲಾದ್ ಪ್ರಯುಕ್ತ ಪಜೀರು ರಹ್ಮಾನಿಯ ಜುಮಾ ಮಸೀದಿ ಮತ್ತು ಜಮಿಯತ್ತುತುಲ್ ಫ್ರೆಂಡ್ಸ್ ಎಸೋಸಿಯೇಶನ್ನ ಸಂಯುಕ್ತ ಆಶ್ರಯದಲ್ಲಿ ಮೀಲಾದುನ್ನಬಿ ಮತ್ತು ಮದ್ರಸ ಮಕ್ಕಳ ಮೀಲಾದ್ ಫೆಸ್ಟ್ ಕಾರ್ಯಕ್ರಮ ಮಸೀದಿಯ ವಠಾರದಲ್ಲಿ ಮಂಗಳವಾರ ನಡೆಯಿತು.
ದ.ಕ. ಜಿಲ್ಲಾ ವಕ್ಫ್ ಸಲಹಾ ಸಮಿತಿ ಸದಸ್ಯ ಉಮರ್ ಪಜೀರು ಮಾತನಾಡಿ, ಮಕ್ಕಳು ತನ್ನ ಪ್ರತಿಭೆಯನ್ನು ಪೋಷಕರ ಎದುರು ಅನಾವರಣ ಮಾಡುವ ಈ ದಿನದ ವಿಶೇಷ ಕಾರ್ಯಕ್ರಮ. ಇಂತಹ ದಿನಗಳಲ್ಲಿ ಸಮಾಜಮುಖಿ ಕೆಲಸ ಆಗಲಿ ಎಂದು ಆಶಿಸಿದರು.
ರಹ್ಮಾನಿಯ ಜುಮಾ ಮಸೀದಿಯ ಅಧ್ಯಕ್ಷ ಹಾಜಿ ಅಬ್ದುಲ್ ರಜಾಕ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮೀಲಾದುನ್ನಬಿ ಸಂದೇಶ ನೀಡಿದರು.
ಇಬ್ರಾಹಿಂ ಹಾಜಿ, ಅಬ್ದುಲ್ ಖಾದರ್ ಜೆ, ಪಿ. ಅಬ್ದುಲ್ ಖಾದರ್, ಪಿ. ಮಹಮ್ಮದ್, ಅಬೂಬಕರ್ ಪಾಡಿ, ಅಬೂಬಕರ್ ಸಿಗ್ಮಾ, ರಫೀಕ್ ಪಜೀರು, ಮೌಲಾನ ಇಸ್ಮಾಯಿಲ್ ಮದನಿ, ಅಬ್ದುಲ್ ಖಾದರ್ ಮದನಿ, ಅಬ್ದುಲ್ ಖಾದರ್ ದಾರಿಮಿ, ಸಿಎಚ್. ಲತೀಫ್, ಸಿ.ಎಚ್. ಮೊಯ್ದಿನ್, ಅಶ್ರಫ್ ಹಾಗೂ ಇಬ್ರಾಹಿಂ ಕಾಪಿಕಾಡ್ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.