UN NETWORKS
ಕೋಟೆಕಾರ್: ವಿದ್ಯಾರ್ಥಿಗಳು ಎಲ್ಲಾ ಚಟುವಟಿಕೆಗಳಿಗೆ ಉತ್ತಮ ರೀತಿಯಲ್ಲಿ ಭಾಗವಹಿಸಿ ಬಹುಮಾನ ಪಡೆದರು. ಬಹುಮಾನ ಸಿಗದವರು ಬೇಸರ ಮಾಡದೇ ಇನ್ನು ಮುಂದಿನ ಚಟುವಟಿಕೆಯಲ್ಲಿ ಭಾಗವಹಿಸಿ ಬಹುಮಾನ ಪಡೆಯಬೇಕು ಎಂದು ಕೊಣಾಜೆ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಮತ್ತು ಹಳೇ ವಿದ್ಯಾರ್ಥಿ ಸವಿತಾ ಗಟ್ಟಿ ಹೇಳಿದರು.
ಪ್ರತಿಭ ಪುರಸ್ಕಾರ ಮತ್ತು ಸಾಂಸ್ಕøತಿಕ ಸ್ಪರ್ಧೆಯಲ್ಲಿ ಗೆದ್ದವರಿಗೆ ಬಹುಮಾನ ವಿತರಣೆ ಮಾಡಲಾಯಿತು.ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷ ಜೀವನ್ ಸೋಮೇಶ್ವರ , ಉಪಾಧ್ಯಕ್ಷ ಶಕುಂತಲ, ಗೌರವಾಧ್ಯಕ್ಷ ಕೃಷ್ಣಪ್ಪ ಅಡ್ಕ ಮೊದಲಾದವರು ಉಪಸ್ಥಿತರಿದ್ದರು.ಗಾಯತ್ರಿ ಅದ್ಯಪಾಡಿ ಸ್ವಾಗತಿಸಿದರು. ಪ್ರದೀ ಕುಮಾರ್ ಮತ್ತು ಗಣೇಶ್ ಬಹುಮಾನ ವಿತರಣೆ ಮಾಡಿದರು. ಶ್ರೀನಿವಾಸ್ ಶೆಣೈ ವಂದಿಸಿದರು.