UN NETWORKS
ಹರೇಕಳ: ಯಾವುದೇ ಒಂದು ಶಿಕ್ಷಣ ಸಂಸ್ಥೆ ಬೆಳವಣಿಗೆ ಕಾಣಬೇಕಾದರೆ ಹಿರಿಯ ವಿದ್ಯಾರ್ಥಿಗಳ ಸಹಕಾರ, ನಿರಂತರ ಪಾಲ್ಗೊಳ್ಳುವಿಕೆ ಮುಖ್ಯ ಎಂದು ದೇರಳಕಟ್ಟೆ ಕೆ.ಎಸ್.ಹೆಗ್ಡೆ ಆಸ್ಪತ್ರೆಯ ಮೂಳೆ ತಜ್ಞ ಡಾ.ವಿಕ್ರಮ್ ಶೆಟ್ಟಿ ಅಭಿಪ್ರಾಯಪಟ್ಟರು.
ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಮನೋಜ್ ಹೆಗ್ಡೆ ದೆಬ್ಬೇಲಿ ಅಧ್ಯಕ್ಷತೆ ವಹಿಸಿದ್ದರು. ಪ್ರೌಢಶಾಲೆಯ ಮುಖ್ಯ ಶಿಕ್ಷಕ ರವೀಂದ್ರ ರೈ ಕಲ್ಲಿಮಾರ್, ತ್ರಿಶಕ್ತಿ ವಿದ್ಯಾವರ್ಧಕ ಸಂಘದ ಸಂಚಾಲಕ ಪ್ರಹ್ಲಾದ್ ರೈ ಮುದಲೇಮಾರು, ಕ್ರೀಡಾ ಸಂಚಾಲಕ ಮುದಲೇಮಾರು ರೂಪರಾಜ್ ರೈ ಉಪಸ್ಥಿತರಿದ್ದರು.ಶಾಲಾ ಸಂಚಾಲಕ ಜಯರಾಮ ಆಳ್ವ ಮೋಟಾರ್ ಸ್ವಾಗತಿಸಿದರು. ಹಳೆ ವಿದ್ಯಾರ್ಥಿ ಮೋಹನ್ ದಾಸ್ ಉಳಿದೊಟ್ಟು ವಂದಿಸಿದರು. ರಾಜೇಶ್ ಶೆಟ್ಟಿ ಪಜೀರ್ ಗುತ್ತು ಕಾರ್ಯಕ್ರಮ ನಿರೂಪಿಸಿದರು.
‘ಹಳೆ ವಿದ್ಯಾರ್ಥಿ ಸಂಘ ಆರಂಭಗೊಂಡು ಹತ್ತು ವರ್ಷಗಳಾಗಿವೆ, ಶಾಲೆಯಲ್ಲಿ ಕಲಿತವರು ಕೇವಲ ಕ್ರೀಡೆಯಲ್ಲಿ ಭಾಗವಹಿಸಿದರೆ ಸಾಲದು, ಬೆಂಬಲವೂ ನೀಡಬೇಕಿದೆ’
ಮನೋಜ್ ಕುಮಾರ್ ಹೆಗ್ಡೆ ದೆಬ್ಬೇಲಿ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ