UN NETWORKS
ತೊಕ್ಕೊಟ್ಟು: ಸಂತ ಸೆಬೆಸ್ತಿಯನ್ನರ ಧರ್ಮಕೇಂದ್ರ ಸಿಎಲ್ ಸಿ ಪೆರ್ಮನ್ನೂರು ಸಮುದಾಯದ 43 ನೇ ವಾರ್ಷಿಕೋತ್ಸವ ಸಮಾರಂಭ ಬಲಿಪೂಜೆ ಮೂಲಕ ಆಚರಿಸಲಾಯಿತು.
ಇದೇ ಸಂದರ್ಭ ಕೆ ಎಸ್ ಆರ್ ಟಿಸಿ ಸಂಸ್ಥೆಯಲ್ಲಿ 25 ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಉತ್ತಮ ನಿರ್ವಾಹಕ ಎಂಬ ಪ್ರಶಂಸೆ ಹೊಂದಿರುವ ಉರ್ಬನ್ ಅಪೋಸ್ ಎಂಬವರನ್ನು ಸನ್ಮಾನಿಸಲಾಯಿತು. ಸಿ.ಎಲ್ ಸಿ ಅಧ್ಯಕ್ಷ ಜೋಸೆಫ್ ಡಿಸೋಜ ಸ್ವಾಗತಿಸಿದರು. ಸಹ ಕಾರ್ಯದರ್ಶಿ ಜೋಸೆಫ್ ಡೇಸಾ ವಂದಿಸಿದರು. ಮೌರೀಸ್ ಮೊಂತೇರೊ ಕಾರ್ಯಕ್ರಮ ನಿರೂಪಿಸಿದರು.