Site icon Ullalavani

ಬಿ.ಜೆ.ಪಿ. ಮಂಗಳೂರು ಮಂಡಲ ವತಿಯಿಂದ ವಾಜಪೇಯಿ ಜನ್ಮದಿನಾಚರಣೆ

UN NETWORKS

ಉಳ್ಳಾಲ: ಬಿ.ಜೆ.ಪಿ. ಮಂಗಳೂರು ಕ್ಷೇತ್ರದ ವತಿಯಿಂದ, ತೊಕ್ಕೊಟಿನ ಪಕ್ಷದ ಕಛೇರಿಯಲ್ಲಿ, ಭಾರತ ರತ್ನ, ದೇಶದ ಮಾಜಿ ಪ್ರಧಾನಿ, ಅಜಾತ ಶತ್ರು ದಿವಂಗತ ಅಟಲ್ ಬಿಹಾರಿ ವಾಜಪೇಯಿ ಅವರ 95 ನೆ ಹುಟ್ಟುಹಬ್ಬವನ್ನು ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ಆಚರಿಸಲಾಯಿತು.

ಈ ಸಂಧರ್ಬದಲ್ಲಿ ಕ್ಷೇತ್ರದ ಬಿ.ಜೆ.ಪಿ. ಅಧ್ಯಕ್ಚರಾದ ಸಂತೋಷ್ ಕುಮಾರ್ ಬೋಳಿಯಾರ್, ಪ್ರಧಾನ ಕಾರ್ಯದರ್ಶಿ ಮೋಹನ್ ರಾಜ್, ಹಿರಿಯರಾದ ಸಂಜೀವ ಶೆಟ್ಟಿ, ತಾಲೂಕು ಪಂ. ಸದಸ್ಯರಾದ ರವಿಶಂಕರ್, ಕೋಟೆಕಾರ್ ಪಟ್ಟಣ ಪಂ. ಉಪಾಧ್ಯಕ್ಷೆ ಭಾರತಿ ಗಟ್ಟಿ, ಸದಸ್ಯರಾದ ಅನಿಲ್ ಬಗಂಬಿಲ, ಉಳ್ಳಾಲ ನಗರಸಭೆಯ ಸದಸ್ಯರಾದ ರಾಜೇಶ್ ಯು.ಬಿ., ಉಳ್ಳಾಲ ಶಕ್ತಿ ಕೇಂದ್ರದ ಅಧ್ಯಕ್ಷರಾದ ಸುರೇಂದ್ರ ಶೆಟ್ಟಿ, ಪ್ರ.ಕಾರ್ಯದರ್ಶಿ ಪ್ರಶಾಂತ್ ಕಾಪಿಕಾಡ್, ರಂಜಿತ್ ಗಟ್ಟಿ ಉಪಸ್ಥಿತಿರಿದ್ದರು.

Exit mobile version