UN NETWORKS
ಉಚ್ಚಿಲ: ರಾಷ್ಟ್ರೀಯ ದಂತ ವೈದ್ಯರ ದಿನದ ಅಂಗವಾಗಿ ಮಂಗಳೂರಿನ ಚೂಂತಾರು ಸರೋಜಿನಿ ಭಟ್ ಪ್ರತಿಷ್ಠಾನದ ವತಿಯಿಂದ ಉಚ್ಚಿಲಗುಡ್ಡೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ದಂತ ಆರೋಗ್ಯ ಮಾಹಿತಿ ಶಿಬಿರ ನಡೆಯಿತು.
ಕಾರ್ಯಕ್ರಮದಲ್ಲಿ ಶಾಲೆಯ 40ಮಕ್ಕಳಿಗೆ ಉಚಿತವಾಗಿ ಟೂತ್ ಪೇಸ್ಟ್ ಮತ್ತು ದಂತ ಆರೋಗ್ಯ ಮಾಹಿತಿ ಕರಪತ್ರವನ್ನು ಪ್ರತಿಷ್ಠಾನದ ವತಿಯಿಂದ ನೀಡಲಾಯಿತು. ಶಾಲಾ ಶಿಕ್ಷಕಿಯರುಗಳಾದ ಬಬಿತಾ ಹಾಗೂ ಶೋಭಿಕಾ ಉಪಸ್ಥಿತರಿದ್ದರು.