Site icon Ullalavani

ದೈಹಿಕ ಕ್ಷಮತೆ ಕಾಪಾಡಿಕೊಳ್ಳಿ: ಶ್ರೀ ವೇದಮೂರ್ತಿ

UN NETWORKS

ಉಳ್ಳಾಲ: ದ.ಕ. ಜಿಲ್ಲಾ ಗೃಹರಕ್ಷಕದಳದ ವತಿಯಿಂದ ನಡೆದ ಜಿಲ್ಲಾ ಮಟ್ಟದ ವೃತ್ತಿಪರ ಕ್ರೀಡಾಕೂಟ- 2018 ಸಮಾರೋಪ ಗೃಹರಕ್ಷಕದಳದ ಕಚೇರಿ ಆವರಣದಲ್ಲಿ  ನಡೆಯಿತು.

ಸಮಾರೋಪದಲ್ಲಿ ಮಂಗಳೂರಿನ ನಾಗರೀಕ ಹಕ್ಕು ಜಾರಿ ನಿರ್ದೇಶನಾಲಯದ ಪೊಲೀಸ್ ಅಧೀಕ್ಷಕ ಶ್ರೀ ವೇದಮೂರ್ತಿ ಮಾತನಾಡಿ ಗೃಹರಕ್ಷಕರು ದಿನದ 24 ಗಂಟೆ ಕೆಲಸ ನಿರ್ವಹಿಸುವ ಅನಿವಾರ್ಯತೆ ಇರುತ್ತದೆ. ಪೊಲೀಸ್ ಇಲಾಖೆಗೆ ಹೆಗಲು ಕೊಟ್ಟು ಕೆಲಸ ನಿರ್ವಹಿಸುವ ಗೃಹರಕ್ಷಕರಿಗೆ ದೈಹಿಕ ಕ್ಷಮತೆ ಅತೀ ಅಗತ್ಯ. ಆ ನಿಟ್ಟಿನಲ್ಲಿ ಕ್ರೀಡಾಕೂಟಗಳು ಅತೀ ಅವಶ್ಯಕ ಮತ್ತು ಎಲ್ಲ ಗೃಹರಕ್ಷಕರಿಗೂ ಆಟೋಟಗಳಲ್ಲಿ ಪಾಲ್ಗೊಳ್ಳ್ಳುವ ಅವಕಾಶ ಸಿಗಬೇಕು ಎಂದು ಅಭಿಪ್ರಾಯಪಟ್ಟರು. ಜಿಲ್ಲಾ ಗೃಹರಕ್ಷಕದಳದ ಸಮಾದೇಷ್ಠ ಡಾ. ಮುರಲೀ ಮೋಹನ್ ಚೂಂತಾರು ಅಧ್ಯಕ್ಷತೆ ವಹಿಸಿದ್ದರು.ಲಯನ್ಸ್ ಕ್ಲಬ್ ಮಂಗಳೂರು ಉಪಾಧ್ಯಕ್ಷ ಸತೀಶ್ ರೈ ಬಹುಮಾನ ವಿತರಿಸಿದರು.

ವಿಕಾಸ್ ಸಮೂಹ ಸಂಸ್ಥೆಯ ಡೀನ್ ಮಂಜುಳಾ ಅನಿಲ್ ರಾವ್, ಕಚೇರಿ ಅಧೀಕ್ಷ ರತ್ನಾಕರ್, ಪ್ರಥಮ ದರ್ಜೆ ಸಹಾಯಕಿ ಅನಿತಾ.ಟಿ.ಎಸ್., ಲಯನ್ಸ್ ಕ್ಲಬ್ ಮಂಗಳೂರು ಕಾರ್ಯದರ್ಶಿ ಹೇಮರಾವ್ ಮತ್ತು ಲಯನ್ಸ್ ಕ್ಲಬ್ ಅಧ್ಯಕ್ಷೆ ಗೀತಾ, ವಿವಿಧ ಘಟಕಗಳ ಘಟಕಾಧಿರಿಗಳಾದ ಶ್ರೀನಿವಾಸ ಆಚಾರ್ಯ, ದಿನೇಶ್, ಹರೀಶ್ ಆಚಾರ್ಯ, ರಮೇಶ್, ಸಂಜೀವ, ಅಬ್ದುಲ್ ಗಫೂರ್ ಹಾಗೂ ಪಿ. ವಸಂತ ಕುಮಾರ್ ಉಪಸ್ಥಿತರಿದ್ದರು.

ಪಣಂಬೂರು ಘಟಕದ ಪರಮೇಶ್ವರ್ ಅವರು ಪುರುಷರ ವಿಭಾಗದ ವೈಯಕ್ತಿಕ ಚಾಂಪಿಯನ್ ಹಾಗೂ ಬಂಟ್ವಾಳ ಘಟಕದ ಗೀತಾ ಅವರು ಮಹಿಳಾ ವಿಭಾಗದ ವೈಯಕ್ತಿಕ ಚಾಂಪಿಯನ್ ಪ್ರಶಸ್ತಿ ಪಡೆದರು. ಜಿಲ್ಲಾ ಗೃಹರಕ್ಷಕದಳದ 35ಮಂದಿ ಗೃಹರಕ್ಷಕರು ಜನವರಿ 6,7,8ರಂದು ನಡೆಯುವ ಪಶ್ಚಿಮ ವಲಯದ ಕ್ರೀಡಾಕೂಟಕ್ಕೆ ಆಯ್ಕೆಯಾದರು. ಡೆಪ್ಯೂಟಿ ಕಮಾಂಡೆಂಟ್ ರಮೇಶ್ ಸ್ವಾಗತಿಸಿದರು. ಸೆಕೆಂಡ್ ಇನ್ ಕಮಾಂಡೆಂಟ್ ಮೊಹಮ್ಮದ್ ಇಸ್ಮಾಯಿಲ್ ವಂದಿಸಿದರು. ರಮೇಶ್ ಭಂಡಾರಿ ಕಾರ್ಯಕ್ರಮ ನಿರೂಪಿಸಿದರು.

Exit mobile version