Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
UllalavaniUllalavani
ಗ್ರಾಮ

` ಅಲೆದಾಡಿ ಪ್ರಶಸ್ತಿಯನ್ನು ಸ್ವೀಕರಿಸುವ ಗುಣ ತನ್ನದಲ್ಲ’ – ಜಾನಪದ ವಿದ್ವಾಂಸ ಡಾ. ಅಮೃತ ಸೋಮೇಶ್ವರ

UllalaVaniBy UllalaVaniMay 15, 2015No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಉಳ್ಳಾಲ್ ನ್ಯೂಸ್ ಡೆಸ್ಕ್

ಉಳ್ಳಾಲ: ‘ಬೆನ್ನ ಹಿಂದೆ ಅಲೆದಾಡಿ ಪ್ರಶಸ್ತಿಯನ್ನು ಸ್ವೀಕರಿಸುವ ಗುಣ ತನ್ನದಲ್ಲ. ಸಾಹಿತ್ಯ ಕ್ಷೇತ್ರದಲ್ಲಿ ನಡೆಸಿರುವ ಸಾಧನೆಯನ್ನು ಗುರುತಿಸಿ ಸಂಘ-ಸಂಸ್ಥೆಗಳು ನೀಡಿರುವ ಪ್ರಶಸ್ತಿಯನ್ನು ಸಂತೋಷದಿಂದ ಸ್ವೀಕರಿಸಿದ್ದೇನೆ. ಆದರೆ ಕ್ಷೇತ್ರದಲ್ಲಿನ ಸಾಧನೆ ಪ್ರಶಸ್ತಿ ಸ್ವೀಕರಿಸುವಷ್ಟು ದೊಡ್ಡದಲ್ಲ, ಮುಂದೆಯೂ ಕ್ಷೇತ್ರದಲ್ಲಿ ಸಾಧನೆ ನಡೆಸಬೇಕಿತ್ತು ಎನ್ನುವ ಆಶಯ ತನ್ನಲ್ಲಿದೆ ಎಂದು ಹಿರಿಯ ಜಾನಪದ ವಿದ್ವಾಂಸ ಡಾ. ಅಮೃತ ಸೋಮೇಶ್ವರ ಹೇಳಿದ್ದಾರೆ.

02 03 04 07 14ullal1 14ullal   1 DSC_7652 DSC_7657 DSC_7706 DSC_7716 DSC_7719
ಅವರು ಸೋಮೇಶ್ವರ ಅವರ ನಿವಾಸ ಒಲುಮೆ’ಯಲ್ಲಿ ಬುಧವಾರ ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಹಲಸಂಗಿ ಗೆಳೆಯರ ಪ್ರತಿಷ್ಟಾನ, ವಿಜಯಪುರ ಇದರ ಆಶ್ರಯದಲ್ಲಿ ಜರಗಿದ ಕನ್ನಡ ಸಾಹಿತ್ಯ ಪರಿಷತ್ತು ಶತಮಾನ ಪ್ರಶಸ್ತಿ ಮತ್ತು ಹಲಸಂಗಿ ಗೆಳೆಯರ ಪ್ರತಿಷ್ಠಾನ ಪ್ರಶಸ್ತಿಯನ್ನು ಸ್ವೀಕರಿಸಿ ಮಾತನಾಡಿದರು.
ಸಾಹಿತ್ಯ ಕ್ಷೇತ್ರದಲ್ಲಿ ಸಂಬಂಧಗಳಿಗೆ ಹೆಚ್ಚಿನ ಮಹತ್ವವಿದೆ. ಇಂತಹ ಸಂಬಂಧಗಳನ್ನು ಬೆಳೆಸುವ ಕಾರ್‍ಯ ಪ್ರಶಸ್ತಿ ಪ್ರಧಾನ ಸಮಾರಂಭದಿಂದ ನಡೆದಿದೆ. ಸಾಹಿತ್ಯ ಕ್ಷೇತ್ರದಲ್ಲಿ ಇನ್ನೂ ಸಾಧನೆ ಮಾಡಬೇಕಿತ್ತು. ಆದರೂ ಸಾಹಿತ್ಯವನ್ನು ದುಡಿಮೆಯಾಗಿ ತೆಗೆದುಕೊಂಡು ಬಾಳುವುದು ಜೀವನದ ಸಾಧನೆಯಾಗಿದೆ. ಕೃತಜ್ಞತೆ ಭಾವ ವಿಶಿಷ್ಟ ಮೌಲ್ಯವನ್ನು ಹೊಂದಿದೆ. ಅದನ್ನು ಸತ್ಕಾರಗಳ ಮೂಲಕ ಪಡೆಯುವ ಪ್ರಜ್ಞೆ ಎಲ್ಲರಲ್ಲಿರಬೇಕು. ಕೃತಿಗಳನ್ನು ಜಗತ್ತಿನಾದ್ಯಂತ ಬಾಷಾಂತರದ ಮೂಲಕ ಪಸರಿಸುವ ವಿಶ್ವಾಸ ಸಂತಸವನ್ನು ತಂದಿದೆ ಎಂದರು.
ಪ್ರಶಸ್ತಿ ಪ್ರಧಾನ ಕಾರ್ಯಕ್ರಮಕ್ಕೆ ನರ್ಮದಾ ಅಮೃತಾ ಸೋಮೇಶ್ವರ ಚಾಲನೆ ನೀಡಿದರು.
ಪ್ರಶಸ್ತಿ ಪ್ರಧಾನ ನಡೆಸಿದ ಮಂಗಳೂರು ವಿಶ್ವವಿದ್ಯಾನಿಲಯದ ಉಪಕುಲಪತಿ ಪ್ರೊ.ಕೆ.ಭೈರಪ್ಪ ಮಾತನಾಡಿ ಆಧುನಿಕ ತಾಂತ್ರಿಕ ಯುಗದಲ್ಲಿ ಯುವಪೀಳಿಗೆಗಳು ಕಲೆ, ಸಾಹಿತ್ಯ, ಸಂಸ್ಕೃತಿಗೆ ಹೆಚ್ಚಿನ ಒಲವು ನೀಡುತ್ತಿಲ್ಲ. ಹಿರಿಯ ವಿದ್ವಾಂಸರ ಆದರ್ಶಗಳನ್ನು ಇಂದಿನ ಪೀಳಿಗೆಗೆ ಗುರುತಿಸಿ, ಹೆಚ್ಚಿನ ಆಸಕ್ತಿ ವಹಿಸುವಂತೆ ಮಾಡುವ ಕೆಲಸ ಆಗಬೇಕಿದೆ. ಅಮೃತ ಸೋಮೇಶ್ವರ ಅವರ ಕೃತಿಗಳು ಕನ್ನಡ ಮತ್ತು ತುಳು ಭಾಷೆಯಲ್ಲಿ ಉಳಿಯಬಾರದು. ಕೃತಿಗಳನ್ನು ಇತರೆ ಭಾಷೆಗಳಿಗೆ ಭಾಷಾಂತರ ಮಾಡುವ ಮೂಲಕ ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸುವಂತೆ ಮಾಡಬೇಕಿದೆ. ಅಮೃತ ಸೋಮೇಶ್ವರ ಅವರ ಕೃತಿಗಳ ಶಾಶ್ವತವಾಗಿ ಉಳಿಯಬೇಕಾದರೆ, ಅಭಿಮಾನಿಗಳು ಸೇರಿಕೊಂಡು ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ವರ್ಷಕ್ಕೊಮ್ಮೆ ಉಪನ್ಯಾಸ ಸರಮಾಲೆ ಯನ್ನು ನಡೆಸಲು ಸಮ್ಮತಿ ಮತ್ತು ಅದಕ್ಕೆ ಬೇಕಾದ ಎಲ್ಲಾ ವ್ಯವಸ್ಥೆಗಳನ್ನು ವಿ.ವಿ ಮಾಡುತ್ತದೆ ಎಂದ ಅವರು ಅಧ್ಯಯನ ಪೀಠ ಸ್ಥಾಪನೆಗೊಂಡಲ್ಲಿ ಕೃತಿಗಳು ಎಲ್ಲರನ್ನು ಮುಟ್ಟಲು ಸಾಧ್ಯವಾಗುತ್ತದೆ ಎಂದರು.
ಗೂಡಂಗಡಿ ವ್ಯಾಪಾರದಲ್ಲಿ ರಖಂ ಪ್ರಶಸ್ತಿಗೆ ಪಾತ್ರರಾದವರು : ಮಾತಿಗೆ ಸಿಗುವ ಮಹತ್ವದ ಸಂಪನ್ಮೂಲ ವ್ಯಕ್ತಿಯಾಗಿರುವ ಅಮೃತ ಸೋಮೇಶ್ವರ ಅವರು ಸಾಹಿತ್ಯದಲ್ಲಿ ತನ್ನದು ಗೂಡಂಗಡಿ ವ್ಯಾಪಾರ, ರಖಂ ವ್ಯಾಪಾರಿ ಅಲ್ಲ ಎಂದು ಹೇಳಿದ್ದರು. ಇಂದು ಗೂಡಂಗಡಿ ವ್ಯಾಪಾರ ನಡೆಸಿದ ಅಮೃತರು ರಖಂ ಪ್ರಶಸ್ತಿಗೆ ಪಾತ್ರರಾಗಿದ್ದಾರೆ. ಆದರೆ ರಖಂ ಆಗಿ ಸಾಹಿತ್ಯ ಕ್ಷೇತ್ರದಲ್ಲಿರುವವರು ಗೂಡಂಗಡಿ ಪ್ರಶಸ್ತಿಗಳನ್ನು ಪಡೆದುಕೊಳ್ಳುತ್ತಿದ್ದಾರೆ. ತುಳು ಜಾನಪದ ಜಗತ್ತಿನ ಸಮೃದ್ಧಿ ಶಕ್ತಿಯನ್ನು ಯಾವುದೇ ಉಪಕರಣಗಳಿಲ್ಲದೆ ರಚಿಸಿ ಇನ್ನೂ ೧೦೦ ವರ್ಷಗಳವರೆಗೂ ಜಾಗತಿಕ ಮಾನ್ಯತೆಯನ್ನು ಒದಗಿಸಿದವರು ಅಮೃತಸೋಮೇಶ್ವರ ಅವರು ಮಾತ್ರ ಎಂದು ಅಭಿನಂದನಾ ಭಾಷಣ ಮಾಡಿದ ಮಂಗಳೂರು ವಿ.ವಿ ಕನ್ನಡ ಪ್ರಾಧ್ಯಾಪಕ ಡಾ. ಕೆ. ಚಿನ್ನಪ್ಪ ಗೌಡ ಹೇಳಿದರು.
ಮುಖ್ಯ ಅತಿಥಿಗಳಾಗಿ ಸಂಶೋಧಕ ಪ್ರೊ. ಎ.ವಿ. ನಾವಡ, ದ.ಕ. ಜಿಲ್ಲಾ ಪಂಚಾಯತ್ ಉಪಾಧ್ಯಕ್ಷ ಸತೀಶ್ ಕುಂಪಲ, ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ರೊನಾಲ್ಡ್ ಎಸ್. ಕ್ಯಾಸ್ಟಲಿನೊ, ಹಲಸಂಗಿ ಗೆಳೆಯರ ಪ್ರತಿಷ್ಠಾನ ,ವಿಜಯಪುರ ಇದರ ಸಂಚಾಲಕ ಡಾ.ಎಸ್.ಕೆ. ಕೊಪ್ಪಾ, ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಬಿ.ಎ. ಮೊಹಮ್ಮದ್ ಹನೀಫ್, ರಿಜಿಸ್ಟ್ರಾರ್ ಉಮ್ಮರಬ್ಬ, ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ನ ಗೌರವ ಕಾರ್ಯದರ್ಶಿ ಬಿ. ಐತ್ತಪ್ಪ ನಾಯ್ಕ್ ಉಪಸ್ಥಿತರಿದ್ದರು.
ಎಸ್. ಪ್ರದೀಪ್ ಕುಮಾರ ಕಲ್ಕೂರ ಸ್ವಾಗತಿಸಿ ಪ್ರಸ್ತಾವನೆಗೈದರು. ಹಲಸಂಗಿ ಗೆಳೆಯರ ಪ್ರತಿಷ್ಠಾನ ,ವಿಜಯಪುರ ಇದರ ಸದಸ್ಯ ಕಾರ್ಯದರ್ಶಿ ಡಾ. ಸೋಮಶೇಖರ ವಾಲಿ ಮತ್ತು ಬೆಟ್ಟಂಪಾಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಸಹ ಪ್ರಾಧ್ಯಾಪಕ ಡಾ. ವರದರಾಜ ಚಂದ್ರಗಿರಿ ಸನ್ಮಾನ ಪತ್ರ ವಾಚಿಸಿದರು. ಮಂಜುಳಾ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...
Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಸಿದ್ಧತೆಯ ನಡುವೆ ಹಳೆಕೋಟೆ ಸೈಯದ್ ಮದನಿ ಶಾಲೆಯಲ್ಲಿ ಈದ್ ಸಂಭ್ರಮ

March 21, 2026

ಹಿದಾಯತ್ ನಗರ ಮಸೀದಿಯಲ್ಲಿ ಸಂಭ್ರಮದ ಈದ್ ಉಲ್ ಫಿತ್ರ್ ಆಚರಣೆ

March 20, 2026

ಉಳ್ಳಾಲ ಯುನೈಟೆಡ್ ವತಿಯಿಂದ ಪಶ್ಚಿಮ್ ರಿಹ್ಯಾಬ್ ಕೇಂದ್ರದಲ್ಲಿ `ಈದ್’ ಹಬ್ಬ ಆಚರಣೆ

March 20, 2026
Leave A Reply

Advertise
ಸಂಪರ್ಕಿಸಿ

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

ಉಚಿತ ಹೋಮಿಯೋಪಥಿ ಆರೋಗ್ಯ ತಪಾಸಣಾ ಹಾಗೂ ಮಾಹಿತಿ ಶಿಬಿರ

December 15, 2025

ಸೋಮೇಶ್ವರ ಲಯನ್ಸ್ ಕ್ಲಬ್ ಆಶ್ರಯದಲ್ಲಿ ನೇತ್ರಾ ತಪಾಸಣಾ ಶಿಬಿರ

December 6, 2025

ನೂತನ ಅತ್ಯಾಧುನಿಕ ಫಿಸಿಯೋಥೆರಪಿ ಚಿಕಿತ್ಸಾ ಕ್ಲಿನಿಕ್ ಉದ್ಘಾಟನೆ

November 12, 2025
suddi

ಅಕ್ರಮ ಜಾನುವಾರು ಸಾಗಾಟ ಪ್ರಕರಣ; ಇಬ್ಬರ ಬಂಧನ…!!

By UllalaVaniMarch 21, 20260

ಮಂಗಳೂರು, ಮಾ. 21 : ಬಡಗ ಎಡಪದವು ಗ್ರಾಮದ ಸಾಸ್ತಾವು ದೇವಸ್ಥಾನದ ಸಮೀಪ ಫಾರ್ಚೂನರ್ ಕಾರಿನಲ್ಲಿ ಹಿಂಸಾತ್ಮಕ ರೀತಿಯಲ್ಲಿ ಜಾನುವಾರುಗಳನ್ನು ಸಾಗಿಸುತ್ತಿದ್ದ…

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

ಯಕ್ಷಗಾನ ಲೋಕದ ಅಪ್ರತಿಮ ಕಲಾತಪಸ್ವಿ ಸೂರಿಕುಮೇರು ಕೆ. ಗೋವಿಂದ ಭಟ್ ವಿಧಿವಶ

March 21, 2026

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಸಿದ್ಧತೆಯ ನಡುವೆ ಹಳೆಕೋಟೆ ಸೈಯದ್ ಮದನಿ ಶಾಲೆಯಲ್ಲಿ ಈದ್ ಸಂಭ್ರಮ

March 21, 2026

ಹಿದಾಯತ್ ನಗರ ಮಸೀದಿಯಲ್ಲಿ ಸಂಭ್ರಮದ ಈದ್ ಉಲ್ ಫಿತ್ರ್ ಆಚರಣೆ

March 20, 2026
1 2 3 … 1,841 Next
Automatic YouTube Gallery

ಧರ್ಮ ಜೀವನಪದ್ಧತಿ, ಪೂಜೆಗೆ ಮಾತ್ರ ಸೀಮಿತವಲ್ಲ -ಹರಿಕೃಷ್ಣ ಉಪನ್ಯಾಸ

ಕೆರೆಬೈಲ್ ಗುಡ್ಡೆ ಕೊರಗ ತನಿಯ -ಗುಳಿಗ ದೈವದ ಕೋಲ ಪ್ರಯುಕ್ತ ಧಾರ್ಮಿಕ ಸಭೆ; ಧರ್ಮ ಜೀವನಪದ್ಧತಿ, ಪೂಜೆಗೆ ಮಾತ್ರ ಸೀಮಿತವಲ್ಲ -ಹರಿಕೃಷ್ಣ ಉಪನ್ಯಾಸ

ಸ್ಕೂಲ್ ಲೀಡರ್ ಚಿತ್ರಕ್ಕೆ ಪ್ರಶಸ್ತಿ ;ಲವಣಚಂದ್ರಗೆ ಅಭಿನಂದನೆ

📍 Ullal | Dakshina Kannada | Coastal Karnataka News ...
Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಧರ್ಮ ಜೀವನಪದ್ಧತಿ, ಪೂಜೆಗೆ ಮಾತ್ರ ಸೀಮಿತವಲ್ಲ -ಹರಿಕೃಷ್ಣ ಉಪನ್ಯಾಸ
Now Playing
ಧರ್ಮ ಜೀವನಪದ್ಧತಿ, ಪೂಜೆಗೆ ಮಾತ್ರ ಸೀಮಿತವಲ್ಲ -ಹರಿಕೃಷ್ಣ ಉಪನ್ಯಾಸ
ಕೆರೆಬೈಲ್ ಗುಡ್ಡೆ ಕೊರಗ ತನಿಯ -ಗುಳಿಗ ದೈವದ ಕೋಲ ಪ್ರಯುಕ್ತ ಧಾರ್ಮಿಕ ಸಭೆ; ಧರ್ಮ ...
ಕೆರೆಬೈಲ್ ಗುಡ್ಡೆ ಕೊರಗ ತನಿಯ -ಗುಳಿಗ ದೈವದ ಕೋಲ ಪ್ರಯುಕ್ತ ಧಾರ್ಮಿಕ ಸಭೆ; ಧರ್ಮ ಜೀವನಪದ್ಧತಿ, ಪೂಜೆಗೆ ಮಾತ್ರ ಸೀಮಿತವಲ್ಲ -ಹರಿಕೃಷ್ಣ ಉಪನ್ಯಾಸ

ಸ್ಕೂಲ್ ಲೀಡರ್ ಚಿತ್ರಕ್ಕೆ ಪ್ರಶಸ್ತಿ ;ಲವಣಚಂದ್ರಗೆ ಅಭಿನಂದನೆ

📍 Ullal | Dakshina Kannada | Coastal Karnataka News ...
Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
||PROBLEM COVERAGE NEWS|| ರಸ್ತೆ ಪಕ್ಕದಲ್ಲೇ ತ್ಯಾಜ್ಯ ಘಟಕ - ದುರ್ವಾಸನೆ ಸಮಸ್ಯೆ
Now Playing
||PROBLEM COVERAGE NEWS|| ರಸ್ತೆ ಪಕ್ಕದಲ್ಲೇ ತ್ಯಾಜ್ಯ ಘಟಕ - ದುರ್ವಾಸನೆ ಸಮಸ್ಯೆ
ಬಾಳೆಪುಣಿ ಪಂಚಾಯತ್ ವಿರುದ್ಧ ಗ್ರಾಮಸ್ಥರ ಆರೋಪ; ರಸ್ತೆ ಪಕ್ಕದಲ್ಲೇ ತ್ಯಾಜ್ಯ ಘಟಕ- ...
ಬಾಳೆಪುಣಿ ಪಂಚಾಯತ್ ವಿರುದ್ಧ ಗ್ರಾಮಸ್ಥರ ಆರೋಪ; ರಸ್ತೆ ಪಕ್ಕದಲ್ಲೇ ತ್ಯಾಜ್ಯ ಘಟಕ- ದುರ್ವಾಸನೆ ಸಮಸ್ಯೆ

ಸ್ವಚ್ಛತೆ ಮಾಡಬೇಕೆಂದು ಗ್ರಾಮಸ್ಥರ ಆಗ್ರಹ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ ...
Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version
%d