UN NETWORKS
ಕೊಣಾಜೆ: ವಿದ್ಯಾರ್ಥಿಗಳು ತರಗತಿಯ ಪಠ್ಯ ಕಲಿಕೆಯೊಂದಿಗೆ ಕೀಡೆ, ಸಾಂಸ್ಕೃತಿಕ ಮತ್ತಿತರ ಚಟುವಟಿಕೆಗಳಲ್ಲೂ ಸಕ್ರಿಯರಾಗಿ ಪಾಲ್ಗೊಳ್ಳಬೇಕು. ಶಾಲೆಗಳಲ್ಲಿ ಉತ್ತಮ ಶಿಕ್ಷಣ ನೀಡಿದರೆ ಮಕ್ಕಳು ಸರ್ವತೋಮುಖ ಬೆಳವಣಿಗೆ ಕಾಣುವುದರಲ್ಲಿ ಸಂಶಯವಿಲ್ಲ ಎಂದು ಮಂಗಳೂರು ಮೇಯರ್ ಭಾಸ್ಕರ್ ಕೆ. ಅಭಿಪ್ರಾಯಪಟ್ಟಿದ್ದಾರೆ.
ವಿಶ್ವಮಂಗಳ ಎಜುಕೇಶನ್ ಸೊಸೈಟಿ ಅಧ್ಯಕ್ಷ ಪ್ರೊ.ವಿಶ್ವನಾಥ ಕೆ ಅಧ್ಯಕ್ಷ ಸ್ಥಾನದಿಂದ ಮಾತನಾಡಿ, ಶಿಕ್ಷಕರು ವಿದ್ಯಾರ್ಥಿಗಳ ನಡುವೆ ಯಾವುದೇ ರೀತಿಯ ತಾರತಮ್ಯ ತೋರದೆ ಶಿಕ್ಷಣ ಧಾರೆ ಎರೆಯಬೇಕು. ಸಂಸ್ಥೆಯನ್ನು ಮುಂದಿನ ದಿನಗಳಲ್ಲಿ ಇನ್ನಷ್ಟು ಅಭಿವೃದ್ಧಿ ಪಡಿಸುವ ಉದ್ದೇಶದಿಂದ ಶಿಕ್ಷಕ ವರ್ಗಕ್ಕೆ ಎಲ್ಲಾ ರೀತಿಯ ಸಹಕಾರ ನೀಡಲಾಗುವುದು ಎಂದರು.ಪೂರ್ವಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ಅಂತು ಡಿಸೋಜ, ಪ್ರಾಥಮಿಕ ವಿಭಾಗ ಮುಖ್ಯ ಶಿಕ್ಷಕಿ ಶೋಭಾವತಿ, ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಪ್ರಿಯಾ ಎನ್. ಪಿ.ಯು.ವಿಭಾಗದ ಪ್ರಾಂಶುಪಾಲರಾದ ಪೂರ್ಣಿಮಾ ಶೆಟ್ಟಿ ವರದಿ ವಾಚಿಸಿದರು.
ಸಂಸ್ಥೆಯ ಕಾರ್ಯದರ್ಶಿ ಡಾ.ವಿನಯ್ ರಜತ್ ಸ್ವಾಗತಿಸಿದರು. ಕೋಶಾಧಿಕಾರಿ ಡಾ.ಪರಮೇಶ್ವರ ವಂದಿಸಿದರು. ಶೈಕ್ಷಣಿಕ, ಕ್ರೀಡೆ ಮತ್ತು ವಿವಿಧ ಸ್ಪರ್ಧೆಗಳ ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಬಳಿಕ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಪ್ರದರ್ಶನ ನಡೆಯಿತು.