UN NETWORKS
ತೊಕ್ಕೊಟ್ಟು: ತೊಕ್ಕೊಟಿನ ಭಗತ್ ಸಿಂಗ್ ಸೇವಾ ಪ್ರತಿಷ್ಠಾನ ಮತ್ತು ಉಳ್ಳಾಲ ನಗರಸಭೆಯ ಜಂಟಿ ಆಶ್ರಯದಲ್ಲಿ ತೊಕ್ಕೊಟು ಬಸ್ಸು ನಿಲ್ದಾಣ ಮತ್ತು ಆಸುಪಾಸು ಸ್ವಚ್ಛತಾ ಅಭಿಯಾನ ಕಾರ್ಯಕ್ರಮ ಭಾನುವಾರ ನಡೆಯಿತು.
ಉಳ್ಳಾಲ ನಗರಸಭೆಯ ಹಿರಿಯ ಆರೋಗ್ಯಕಾರಿ ಜಯಶಂಕರ್, ಆರೋಗ್ಯ ನಿರೀಕ್ಷಕರು ರಾಜೇಶ್, ಭಗತ್ ಸಿಂಗ್ ಸೇವಾ ಪ್ರತಿಷ್ಠಾನದ ಸ್ಥಾಪಕಧ್ಯಕ್ಷ ಜೀವನ್ ಕುಮಾರ್ ತೊಕ್ಕೊಟು, ಅಧ್ಯಕ್ಷ ರಾಕೇಶ್ ಬೈಪಾಸ್, ನಗರಸಭೆ ಸದಸ್ಯರಾದ ರಾಜೇಶ್ ಯು.ಬಿ., ಪ್ರಧಾನ ಕಾರ್ಯದರ್ಶಿ ಗಣೇಶ್ ಕಾಪಿಕಾಡ್, ಹರೀಶ್ ಅಂಬ್ಲಮೊಗರು, ನವೀನ್ ಎ.ಕೆ., ವಿಶ್ವನಾಥ ಶೆಟ್ಟಿ, ಗಂಗಾಧರ್, ದಾಮೋದರ್ ನಡಾರ್, ರಾಜೇಂದ್ರ, ನಗರಸಭೆಯ ಅಂಗಾರ, ಪೌರ ಕಾರ್ಮಿಕರು ಹಾಗೂ ಪ್ರತಿಷ್ಠಾನದ ಸದಸ್ಯರು ಭಾಗವಹಿಸಿದ್ದರು.


