UN NETWORKS
ಇರಾ: ಶಬರಿಮಲೆಗೆ 40ರ ಹರೆಯದ ಮಹಿಳೆಯರಿಬ್ಬರು ಪ್ರವೇಶಗೈದ ಘಟನೆಯಿಂದ ಮನಸ್ಸಿಗೆ ತೀವ್ರ ಆಘಾತವಾಗಿದ್ದ ನಿರಂತರ 17 ವರ್ಷಗಳ ಕಾಲ ಶಬರಿಮಲೆ ಯಾತ್ರೆ ಕೈಗೊಳ್ಳುತ್ತಿದ್ದ ಗುರುಸ್ವಾಮಿಯೋರ್ವರು ಇರುಮುಡಿ ಕಟ್ಟುತ್ತಿರುವಾಗಲೇ ಸಾವನ್ನಪ್ಪಿರುವ ಘಟನೆ ಇರಾ ಮೂಳೂರಿನಲ್ಲಿ ಇಂದು ನಡೆದಿದೆ.
ಮೃತರು ಪತ್ನಿ, ಇಬ್ಬರು ಪುತ್ರರು ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ. ಸದಾ ಅಯ್ಯಪ್ಪನ ಧ್ಯಾನದಲ್ಲೇ ಇರುತ್ತಿದ್ದ ಇವರಿಗೆ ಇತ್ತೀಚೆಗೆ ಸಂಪ್ರದಾಯ ಮುರಿದು ಮಹಿಳೆಯರು ಪ್ರವೇಶಿಸಿರುವುದರಿಂದ ಆಘಾತಕ್ಕೆ ಒಳಗಾಗಿದ್ದರು. ಈ ಕುರಿತು ತನ್ನ ಜತೆಗಿರುವ ಅಯ್ಯಪ್ಪ ವೃತಧಾರಿಗಳ ಜತೆಗೆ ಅಳಲನ್ನು ತೋಡಿಕೊಂಡಿದ್ದರು. ಕೆಲ ದಿನಗಳ ಹಿಂದಷ್ಟೇ ಶಬರಿಮಲೆ ಹೋಗುವ ವಿಚಾರವಾಗಿ ಬೇಸರ ವ್ಯಕ್ತಪಡಿಸಿದ್ದರು ಎಂದು ಸ್ನೇಹಿತರೊಬ್ಬರು ತಿಳಿಸಿದ್ದರು.