Site icon Ullalavani

ಉಳ್ಳಾಲ : ಎಸ್‍ಎಸ್‍ಎಲ್‍ಸಿ ಪರೀಕ್ಷೆಗಾಗಿ ಸಮುದಾಯದ ಮುಖಂಡರಿಗೊಂದು ವಿಚಾರಗೋಷ್ಠಿ

UN NETWORKS

ಉಳ್ಳಾಲ: ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳ ಫಲಿತಾಂಶವನ್ನು ಉತ್ತಮ ಪಡಿಸುವ ನಿಟ್ಟಿನಲ್ಲಿ ತಾಲೂಕಿನ ಎಲ್ಲಾ ಮಸ್ಜಿದ್‍ನ ಖತೀಬರು, ಮದರಸ ಸದರ್‍ಮುಅಲ್ಲಿಂಗಳಿಗೆ ಹಾಗೂ ಅಧ್ಯಕ್ಷರುಗಳಿಗೆ ವಿಚಾರಗೋಷ್ಠಿಯೊಂದನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಮಂಗಳೂರು ದಕ್ಷಿಣ ವಲಯ, ಉಳ್ಳಾಲ ಕೇಂದ್ರ ಜುಮಾಮಸ್ಜಿದ್‍ಮತ್ತು ಸಯ್ಯದ್ ಮದನಿ ಅರೆಬಿಕ್ ಟ್ರಸ್ಟ್,ಹಾಗೂ ಜಮಿಯತ್ತುಲ್ ಫಲಾಹ್ ಮಂಗಳೂರು ತಾಲೂಕು ಸಮಿತಿಯು ಸಯ್ಯಿದ್‍ಮದನಿ ಸಭಾಂಗಣದಲ್ಲಿ ಜಂಟಿಯಾಗಿ ಆಯೋಜಿಸಿತು.

ಉಳ್ಳಾಲ ದರ್ಗಾದ ಅಧ್ಯಕ್ಷರಾದ ಜನಾಬ್ ಹಾಜಿ ಅಬ್ದುಲ್ ರಶೀದ್‍ರವರ ಅಧ್ಯಕ್ಷತೆಯಲ್ಲಿ ನಡೆದ ವಿಚಾರಗೋಷ್ಠಿಯಲ್ಲಿ ಜಮೀಯ್ಯತ್ತುಲ್ ಫಲಾಹ್ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾಧ್ಯಕ್ಷ ಹಾಜಿ ಶಾಹುಲ್ ಹಮೀದ್‍ರವರು ವಿಷಯ ಮಂಡಿಸಿ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳು ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ತರುವಲ್ಲಿ ಸಮುದಾಯದ ಮುಖಂಡರು ಮಾರ್ಗದರ್ಶನ ನೀಡಬೇಕು ಎಂದರು.ಮಂಗಳೂರು ದಕ್ಷಿಣ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಲೋಕೇಶ್ ರವರು ಉದ್ಫಾಟಿಸಿದ ಕಾರ್ಯಕ್ರಮದಲ್ಲಿ ಸಯ್ಯಿದ್ ಮದನಿ ಅರೆಬಿಕ್ ಎಜ್ಯುಕೇಶನ್ ಟ್ರಸ್ಟ್ ನ ಮುಫತ್ತಿಸ್ ಜನಾಬ್ ಸುಲೈಮಾನ್ ಸಖಾಫಿ ದುವಾ ನೆರವೇರಿಸಿದರು.

ಮುಖ್ಯ ಅತಿಥಿಗಳಾಗಿ ಮಂಗಳುರು ಜಮಿಯ್ಯತ್ತುಲ್ ಫಲಾಹ್ ಮಂಗಳೂರು ತಾಲೂಕು ಸಮಿತಿಯ ಅಧ್ಯಕ್ಷರಾದ ಹಾಜಿ ಇಬ್ರಾಹಿಂ ಕೋಡಿಚಾಲ್, ಉಳ್ಳಾಲ ಕೇಂದ್ರ ಜುಮಾಮಸ್ಜಿದ್ ಪ್ರಧಾನ ಕಾರ್ಯದರ್ಶಿ ಹಾಜಿ ಮುಹಮ್ಮದ್ ತ್ವಾಹಾ ಕ್ಷೇತ್ರ ಸಮನ್ವಯಾಧಿಕಾರಿ ಡಾ|| ಪ್ರಶಾಂತ್, ಸಯ್ಯಿದ್ ಮದನಿ ಚಾರಿಟೇಬಲ್ ಟ್ರಸ್ಟ್‍ನ ಉಪಾಧ್ಯಕ್ಷರಾದ ಮುಸ್ತಫಾ ಅಬ್ದುಲ್ಲಾ, ಅರೇಬಿಕ್ ಟ್ರಸ್ಟ್ ನ ಕಾರ್ಯದರ್ಶಿ ಆಸಿಫ್ ಅಬ್ದುಲ್ಲಾ ಸಯ್ಯಿದ್ ಮದನಿ ಚಾರಿಟೇಬಲ್ ಟ್ರಸ್ಟ್‍ನ ಆಡಳಿತಾಧಿಕಾರಿ ಜನಾಬ್ ಅಬ್ದುಲ್ ಲತೀಫ್ ಶಿಕ್ಷಣ ಸಂಯೋಜಕಿ ಜ್ಯೋತಿ,ಉಳ್ಳಾಲ ವಲಯದ ಪ್ರೌಢಶಾಲಾ ಮುಖ್ಯ ಶಿಕ್ಷಕರು ಉಪಸ್ಥಿತರಿದ್ದರು. ಜಮೀಯ್ಯತ್ತುಲ್ ಫಲಾಹ್‍ನ ಕೋಶಾಧಿಕಾರಿ ಕೆ.ಎಂ.ಕೆ. ಮಂಜನಾಡಿ ಸ್ವಾಗತಿಸಿ ಕಾರ್ಯದರ್ಶಿ ಎಂ.ಹೆಚ್ ಮಲಾರ್ ವಂದಿಸಿದರು.ಸಲಾಂ ಉಸ್ತಾದ್ ಕಾರ್ಯಕ್ರಮ ನಿರೂಪಿಸಿದರು.

Exit mobile version