UN NETWORKS
ತೊಕ್ಕೊಟ್ಟು: ಶಿಕ್ಷಣ ಸಂಸ್ಥೆಯಲ್ಲಿ ಕರುಣೆಯ ಹಾದಿಯ ಜೊತೆಗೆ ಶಿಸ್ತು, ನೈತಿಕ ಬೋಧನೆಯನ್ನು ಬೋಧಿಸಿದ ದೈಹಿಕ ಶಿಕ್ಷಕ ಉರ್ಬಾನ್ ಮಸ್ಕರೇನಸ್ ಅವರ ಕಾರ್ಯವೈಖರಿ ಸ್ಮರಣೀಯ ಎಂದು ಸಂತ ಸೆಬೆಸ್ತಿಯನ್ನರ ಸಮೂಹ ವಿದ್ಯಾಸಂಸ್ಥೆಗಳ ಸಂಚಾಲಕ ಡಾ.ಜೆ. ಬಿ ಸಲ್ದಾನ್ಹ ಅಭಿಪ್ರಾಯಪಟ್ಟರು.
ಅಭಿನಂದನೆ ಸ್ವೀಕರಿಸಿ ಮಾತನಾಡಿದ ಉರ್ಬನ್ ಮಸ್ಕರೇನಸ್, ಕುಟುಂಬ , ಶಾಲಾ ಆಡಳಿತ ಸಮಿತಿ ಹಾಗೂ ಸಹೋದ್ಯೋಗಿಗಳ ಸಹಾಯದಿಂದ ಯಶಸ್ವಿಯಾಗಿ ಕರ್ತವ್ಯ ನಿಭಾಯಿಸಲು ಸಾಧ್ಯವಾಗಿದೆ. ಶಾಲಾ ವಿದಾಯ ಸಮಾರಂಭ ಜೀವನದಲ್ಲಿ ಅವಿಸ್ಮರಣೀಯ ಎಂದರು.
ಈ ಸಂದರ್ಭ ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಮಂಗಳೂರು ದಕ್ಷಿಣ ವಲಯ ವಿಷ್ಣು.ಎನ್ ಹೆಬ್ಬಾರ್, ಮಂಗಳೂರು ದಕ್ಷಿಣ ವಲಯ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ತ್ಯಾಗಂ ಹರೇಕಳ, ಶಾಲಾ ಮುಖ್ಯೋಪಾಧ್ಯಾಯ ರೇಮಂಡ್ ಡಿಸೋಜ ಉಪಸ್ಥಿತರಿದ್ದರು. ಸಂತ ಸೆಬೆಸ್ತಿಯನ್ನರ ಆಂಗ್ಲ ಮಾಧ್ಯಮ ಶಾಲಾ ಮುಖ್ಯೋಪಾಧ್ಯಾಯಿನಿ ಅನಿತಾ ನಥಾಯಸ್ , ಹೋಲಿ ಏಂಜೆಲ್ಸ್ ಕನ್ನಡ ಮಾಧ್ಯಮ ಶಾಲಾ ಮುಖ್ಯೋಪಾಧ್ಯಾಯಿನಿ ಸೆವರೀನ್ ಫೆರ್ನಾಂಡಿಸ್, ಪದವಿಪೂರ್ವ ಕಾಲೇಜು ಉಪಪ್ರಾಂಶುಪಾಲೆ ಪ್ರಮೀಳಾ ಡಿಸೋಜ, ಸಿಆರ್ ಪಿ ಆಶಾಲತಾ ಉಪಸ್ಥಿತರಿದ್ದರು.ಶಿಕ್ಷಕ ಸಿರಿಲ್ ವೇಗಸ್ ಸ್ವಾಗತಿಸಿದರು.ಸನ್ಮಾನ ಪತ್ರವನ್ನು ಶಿಕ್ಷಕ ಬಿ.ವೆಂಕಟರಮಣ ಭಟ್ ವಾಚಿಸಿದರು. ಸ್ಟೀಫನ್ ವಂದಿಸಿದರು.