UN NETWORKS
ಉಳ್ಳಾಲ: ದೊಡ್ಡ ಕೆಲಸವಾದರೂ, ಸಣ್ಣ ಕೆಲಸವಾದರೂ ಸರಿ, ಅದನ್ನು ಪ್ರೀತಿಯಿಂದ ಮಾಡಬೇಕು. ಆಗ ಮಾತ್ರ ಯಶಸ್ಸು ನಮಗೆ ಸಿಗಲು ಸಾಧ್ಯ. ಇದನ್ನು ನೋಡಿ ಮತ್ತೊಬ್ಬರು ಕಲಿಯುತ್ತಾರೆ. ಇದರಿಂದ ಸ್ವಚ್ಛತೆ ಉಳಿಯುತ್ತದೆ. ಶಾಲೆಯ ಸುತ್ತ ಮೀನು ವಾಸನೆ ಬಂದರೂ ಟಿಪ್ಪು ಸುಲ್ತಾನ್ ಶಾಲೆ ಸ್ವಚ್ಛವಾಗಿದೆ. ಇಂತಹ ಕೆಲಸಗಳನ್ನು ಮಾಡುವ ಮೂಲಕ ಭಾವೀ ಪ್ರಜೆಗಳಾಗಿ ಉನ್ನತ ಹಂತಕ್ಕೆ ವಿದ್ಯಾರ್ಥಿಗಳು ಬೆಳೆಯಲಿ ಎಂದು ದ.ಕ. ಜಿಲ್ಲಾ ವಾರ್ತಾಧಿಕಾರಿ ರೋಹಿಣಿ ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೇಂದ್ರ ಜುಮಾ ಮಸೀದಿ ಉಪಾಧ್ಯಕ್ಷ ಮೋನು ಇಸ್ಮಾಯಿಲ್ ವಹಿಸಿದ್ದರು. ಉಳ್ಳಾಲ ಕೌನ್ಸಿಲರ್ ಮುಹಮ್ಮದ್ ರಮೀಝ್, ದ.ಕ. ಜಿಲ್ಲಾ ಸ್ವಚ್ಛತಾ ರಾಯಬಾರಿ ಶೀನ ಶೆಟ್ಟಿ, ಜನ ಶಿಕ್ಷಣ ಟ್ರಸ್ಟ್ ನಿರ್ದೇಶಕ ಕೃಷ್ಣ ಮೂಲ್ಯ, ಇಲ್ಯಾಸ್, ಬಾವ ಮೊಹಮ್ಮದ್, ಅಬ್ದುಲ್ ರಹಿಮಾನ್, ಅಬ್ದುಲ್ ರಝಾಕ್ ಉಪಸ್ಥಿತರಿದ್ದರು.ಎಂಎಚ್ ಮಲಾರ್ ಸ್ವಾಗತಿಸಿದರು. ಬಿ.ಎಂ. ರಫೀಕ್ ತುಂಬೆ ಕಾರ್ಯಕ್ರಮ ನಿರೂಪಿಸಿದರು. ಗೀತಾ ವಂದಿಸಿದರು.