UN NETWORKS
ಉಳ್ಳಾಲ: ನಾವು ಕೆಲಸಕ್ಕೆ ಜಾಸ್ತಿ ಒತ್ತುಕೊಡಬೇಕಾಗಿದೆಯೇ ಹೊರತು ಮಾತಿಗಲ್ಲ. ಆ ಕೆಲಸ ಉಳ್ಳಾಲ ಹಳೆಕೋಟೆ ಶಾಲೆಯಲ್ಲಿ ಆಗಿದೆ. ತಾಜ್ಯವನ್ನು ಸಂಗ್ರಹಣೆ ಮಾಡುವ ಮೂಲಕ ದೇಶದ ಗಮನ ಸೆಳೆಯುವಂತಹ ಕೆಲಸ ನಡೆದಿದೆ. ಯಾರೂ ಮಾಡದ ಕೆಲಸ ಹಳೆಕೋಟೆಯಲ್ಲಿ ವಿದ್ಯಾರ್ಥಿ ಗಳಿಂದ ಆಗಿದೆ. ಇಂತಹ ಕೆಲಸ ಎಲ್ಲೂ ಆಗಿಲ್ಲ. ಈ ಕೆಲಸ ದೇಶದ ಗಮನ ಸೆಳೆಯುತ್ತದೆ. ಇದರ ಎದುರು ನಮಗೆ ಮಾತನಾಡುವಂತಹ ಶಕ್ತಿ ಇಲ್ಲ. ರಾಜ್ಯಕ್ಕೆ ಗೌರವ ತರುವಂತಹ ಕೆಲಸ ಇದಾಗಿದೆ. ಇದನ್ನು ನಾವು ಸದಾ ಗೌರವಿಸುತ್ತೇವೆ ಎಂದು ದ.ಕ. ಜಿಲ್ಲಾ ಸ್ವಚ್ಛತಾ ರಾಯಬಾರಿ ಶೀನ ಶೆಟ್ಟಿ ಹೇಳಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ವಾರ್ತಾಧಿಕಾರಿ ರೋಹಿಣಿ ಮಾತನಾಡಿ ವಿದ್ಯಾರ್ಥಿಗಳು ಮಾಡಿದ ಸ್ವಚ್ಚತಾ ಕಾರ್ಯಕ್ರಮದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಶುಭ ಹಾರೈಸಿದರು.ಉಳ್ಳಾಲ ನಗರ ಪೌರಾಯುಕ್ತೆ ವಾಣಿ ವೀ ಆಳ್ವ, ಕೇಂದ್ರ ಜುಮಾ ಮಸೀದಿ ನಗರ ಸಭಾ ಸದಸ್ಯ ರವೂಫ್, ಮೊಹಮ್ಮದ್, ಇಬ್ರಾಹಿಂ, ಶಾಲಾಭಿವೃದ್ಧಿ ಸಮಿತಿಯ ಅಲ್ತಾಫ್, ಕೋಶಾಧಿಕಾರಿ ಕರೀಂ, ಸಮಿತಿ ಸದಸ್ಯ ರಹೀಂ ಉಪಸ್ಥಿತರಿದ್ದರು. ಕೆಎಂಕೆ ಮಂಜನಾಡಿ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.