Site icon Ullalavani

ತೊಕ್ಕೊಟ್ಟು: ಬಿ.ಜೆ.ಪಿ ಮಹಿಳಾ ಮೋರ್ಚಾದ ಕ್ಷೇತ್ರ ಕಾರ್ಯಕಾರಿಣಿ ಸಭೆ

UN NETWORKS

ತೊಕ್ಕೊಟ್ಟು: ಮಂಗಳೂರು ವಿಧಾನ ಸಭಾ ಕ್ಷೇತ್ರದ ಬಿ.ಜೆ.ಪಿ ಮಹಿಳಾ ಮೋರ್ಚಾದ ಕ್ಷೇತ್ರ ಕಾರ್ಯಕಾರಿಣಿ ಸಭೆ ತೊಕ್ಕೊಟಿನ ಬಿ.ಜೆ.ಪಿ ಕಚೇರಿಯಲ್ಲಿ ನಡೆಯಿತು.

ಮಹಿಳಾ ಮೋರ್ಚಾದ ಅಧ್ಯಕ್ಷ ರಮಣಿ ಸೋಮೇಶ್ವರ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಮಹಿಳಾ ಮೋರ್ಚಾದ ಅಧ್ಯಕ್ಷ ಪೂಜಾ ಪೈ, ಮುಂದಿನ ದಿನಗಳಲ್ಲಿ ನಡೆಯುವ ಲೋಕಸಭಾ ಚುನಾವಣೆಯಲ್ಲಿ ಪಕ್ಷ ಸಂಘಟನೆಯಲ್ಲಿ ಮಹಿಳೆಯರ ಪಾತ್ರದ ಬಗ್ಗೆ, ಬೂತ್ ಮಟ್ಟದಲ್ಲಿ ಸಕ್ರೀಯ ಸದಸ್ಯರನ್ನು ಗುರುತಿಸುವ ಬಗ್ಗೆ ಮತ್ತು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ ಮಹಿಳಾ ಪರ ಯೋಜನೆ ಮತ್ತು ಇನ್ನಿತರ ಕಾರ್ಯಕ್ರಮದ ಬಗ್ಗೆ ಜನಸಾಮಾನ್ಯರಿಗೆ ಮುಟ್ಟಿಸುವ ಕೆಲಸ ಮಹಿಳಾ ಮೋರ್ಚಾದಿಂದ ಆಗಬೇಕೆಂದು ಎಂದು ಸಲಹೆ ನೀಡಿದರು.
ಕ್ಷೇತ್ರ ಬಿ.ಜೆ.ಪಿ. ಪ್ರಧಾನ ಕಾರ್ಯದರ್ಶಿ ಮೋಹನ್ ರಾಜ್ ಕೆ.ಆರ್. ಜಿಲ್ಲಾ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ರಾಜೀವಿ ಕೆಂಪುಮಣ್ಣು, ಕಾರ್ಯದರ್ಶಿ ವೀಣಾ ಮಂಗಳ, ಕ್ಷೇತ್ರ ಉಪಾಧ್ಯಕ್ಷ ಜಯಶ್ರೀ ಕರ್ಕೇರಾ, ಕೋಟೆಕಾರು ಪಟ್ಟಣ ಪಂಚಯಿತಿ ಉಪಾಧ್ಯಕ್ಷ ಭಾರತಿ ಗಟ್ಟಿ, ಪೂರ್ಣಿಮಾ ಪ್ರಶಾಂತ್, ಉಳ್ಳಾಲ ನಗರಸಭೆ ಸದಸ್ಯರುಗಳಾದ ನಮಿತಾ ಗಟ್ಟಿ, ರೇಶ್ಮಾ ಜಗದೀಶ್, ಪ್ರಮುಖರಾದ ಪೂರ್ಣಿಮಾ ಶೆಟ್ಟಿ, ಸುಮತಿ ಶೆಟ್ಟಿ, ಸುಕನ್ಯಾ ಹಾಗೂ ಶಾರಾದ ಉಪಸ್ಥಿತರಿದ್ದರು.

Exit mobile version