UN NETWORKS
ಉಳ್ಳಾಲ: ಕೌಶಲ್ಯಾಭಿವೃದ್ಧಿ ಉದ್ಯಮ ಶೀಲತೆ ಹಾಗೂ ಜೀವನೋಪಾಯ ಇಲಾಖೆ ಬೆಂಗಳೂರು, ಸಿಡಾಕ್ಧಾರವಾಡ, ವೀರಾಂಜನೇಯ ವ್ಯಾಯಾಮ ಶಾಲೆ ಹಾಗೂ ವೈದ್ಯನಾಥ, ನಾಗಬ್ರಹ್ಮಶ್ರೀ ಮಹಾಗಣಪತಿ ದೇವಸ್ಥಾನ, ಬೈದೆರೆ ಪಾಲು ಸುಂದರಿಬಾಗ್ ಉಳ್ಳಾಲ ಇವರ ಸಂಯುಕ್ತಾಶ್ರಯದಲ್ಲಿ ದೇವಳದ ವಠಾರದಲ್ಲಿ ಸ್ಥಳೀಯ ಹಾಗೂ ಆಸುಪಾಸಿನ ವಿವಿಧ ಸ್ವಸಹಾಯ ಸಂಘದ ಸದಸ್ಯರುಗಳಿಗೆ ಉಚಿತ “ದಿಶಾ ” ಉದ್ಯಮ ಶೀಲತಾ ಜಾಗೃತಿ ಶಿಬಿರ ವ್ಯಾಯಾಮ ಶಾಲೆಯ ದೈಹಿಕ ಶಿಕ್ಷಕರಾದ ವಿಜಯ ಅಮೀನ್ ಅವರ ಅಧ್ಯಕ್ಷತೆಯಲ್ಲಿ ಜರುಗಿತು.
ಸಿಡಾಕ್ನ ಸಲಹೆಗಾರ ಪ್ರವಿಷ್ಯ ಹಾಗೂ ವಿದ್ಯ, ಶ್ರೀವೀರಾಂಜನೇಯ ವ್ಯಾಯಾಮ ಶಾಲೆಯ ಪ್ರಕಾಶ್, ವಸಂತ್ ಉಳ್ಳಾಲ ಹಾಗೂ ಕೆನರಾ ಬ್ಯಾಂಕಿನ ನಿವೃತ್ತ ಶಾಖಾ ವ್ಯವಸ್ಥಾಪಕ ಅಶೋಕ ಬಾಡಿ ಉಪಸ್ಥಿತರಿದ್ದರು.ಸ್ವಸಹಾಯ ಸಂಘದ ಸುಮಾರು ನೂರು ಮಂದಿ ನಿರುದ್ಯೋಗಿ ಯುವಕ ಯುವತಿಯರು ಸಕ್ರಿಯವಾಗಿ ಭಾಗವಹಿಸಿದರು. ಜಯಂತ್ ಸಂಕೋಳಿಗೆ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.ನವೀನ್ ನಾಯಕ್ ವಂದಿಸಿದರು.