UN NETWORKS
ಉಳ್ಳಾಲ: ಡ್ರೈವಿಂಗ್ ಶಾಲೆಯೊಂದರ ಶಿಕ್ಷಕ ದಂಪತಿ ಮೇಲೆ 50 ಮಂದಿಯ ತಂಡವೊಂದು ದಾಳಿ ನಡೆಸಿ ಕಾರು ಪುಡಿಗೈದು ನೈತಿಕ ಪೊಲೀಸ್ ಗಿರಿ ನಡೆಸಿರುವ ಘಟನೆ ನಾಟೆಕಲ್ ಕಣಚೂರು ಆಸ್ಪತ್ರೆ ಎದುರುಗಡೆ ಸೋಮವಾರ ಸಂಜೆ ವೇಳೆ ಸಂಭವಿಸಿದೆ. ಪ್ರಕರಣ ಸಂಬಂಧ ನಾಲ್ವರನ್ನು ಕೊಣಾಜೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಮುಡಿಪು ಸ್ಮಾರ್ಟ್ ಮೋಟಾರ್ ಡ್ರೈವಿಂಗ್ ಶಾಲೆಯ ಥೋಮಸ್(45) ಎಂಬವರಿಗೆ ಗಂಭೀರ ಹಲ್ಲೆ ನಡೆಸಲಾಗಿದೆ.
ಉದ್ರಿಕ್ತ ವಾತಾವರಣ : ಘಟನೆಯಿಂದ ಸ್ಥಳದಲ್ಲಿ ಉದ್ರಿಕ್ತ ವಾತಾವರಣ ನಿರ್ಮಾಣವಾಗಿದೆ. ಕೊಣಾಜೆ ಪೊಲೀಸರು ದಾಳಿಯಲ್ಲಿ ಭಾಗಿಯಾದರೆನ್ನಲಾದ ನಾಲ್ವರನ್ನು ವಶಕ್ಕೆ ಪಡೆಯುತ್ತಿದ್ದಂತೆ, ಸ್ಥಳೀಯರು ಪೊಲೀಸರೊಂದಿಗೆ ಮಾತಿನ ಚಕಮಕಿ ನಡೆಸಿದ್ದಾರೆ. ಇದೀಗ ಕೊಣಾಜೆ ಪೊಲೀಸ್ ಠಾಣೆಯೆದುರು ಜಮಾಯಿಸಿದ್ದಾರೆ. ಸ್ತಳಕ್ಕೆ ಎಸಿಪಿ ರಾಮರಾವ್, ಕೊಣಾಜೆ ಠಾಣಾಧಿಕಾರಿ ರವೀಶ ನಾಯಕ್, ಉಳ್ಳಾಲ ಠಾಣಾಧಿಕಾರಿ ಗೋಪಿಕೃಷ್ಣ ಆಗಮಿಸಿದ್ದು, ಪರಿಸ್ಥಿತಿ ನಿಯಂತ್ರಣಕ್ಕೆ ತಂದರು.