UN NETWORKS
ಹರೇಕಳ: ಹರೇಕಳ ಶ್ರೀ ರಾಮಕೃಷ್ಣ ಪ್ರೌಢಶಾಲೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ದ.ಕ. ಹಾಗೂ ಮಂಗಳೂರಿನ ಟ್ಯಾಲೆಂಟ್ ರಿಸರ್ಚ್ ಫೌಂಡೇಶನ್ನ ಜಂಟಿ ಆಶ್ರಯದಲ್ಲಿ ಎಸ್ಎಸ್ಎಲ್ಸಿಯ ಮಕ್ಕಳಿಗೆ ವಿಷಯವಾರು ತರಬೇತಿ ನಡೆಯಿತು.
ಬಳಿಕ ನಡೆದ ವಿಷಯವಾರು ತರಬೇತಿಯಲ್ಲಿ ದೇರಳಕಟ್ಟೆ ಸರಕಾರಿ ಪ್ರೌಢಶಾಲೆಯ ಗಣಿತ ಅಧ್ಯಾಪಕಿ ನಯನ, ಪಾವೂರು ಸರಕಾರಿ ಪ್ರೌಢಶಾಲೆಯ ವಿಜ್ಞಾನ ಶಿಕ್ಷಕ ಕರುಣಾ ಹಾಗೂ ದೇರಳಕಟ್ಟೆ ಶಾಲೆಯ ವಿಜಯ ತರಬೇತಿ ನೀಡಿದರು.ಮುಖ್ಯ ಶಿಕ್ಷಕ ಕೆ. ರವೀಂದ್ರ ರೈ ಸ್ವಾಗತಿಸಿದರು.ದೈಹಿಕ ಶಿಕ್ಷಕ ತ್ಯಾಗಂ ಹರೇಕಳ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕ ರವಿಶಂಕರ್ ವಂದಿಸಿದರು.