UN NETWORKS
ಉಳ್ಳಾಲ: ತುಳುನಾಡ ರಕ್ಷಣಾ ವೇದಿಕೆಯ ಮಂಗಳೂರು ವಿಧಾನ ಸಭಾ ಕ್ಷೇತ್ರದ ಅಧ್ಯಕ್ಷ ಹಾಗೂ ಯುವ ಹೋರಾಟಗಾರ ಎಂ. ಸಿರಾಜ್ ಅಡ್ಕರೆಗೆ “ಟೈಮ್ಸ್ ಆಫ್ ಕುಡ್ಲ ತುಳುನಾಡ ಬಲಿಪೆ (ತುಳುನಾಡ ಹುಲಿ) ಬಿರುದು” ಹಾಗೂ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ನಡೆಯಿತು. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಎ.ಸಿ. ಭಂಡಾರಿಯವರು ಪ್ರಶಸ್ತಿ ಪ್ರಧಾನಗೈದರು. ತುರವೇ ಸ್ಥಾಪಕಾಧ್ಯಕ್ಷರಾದ ಯೋಗೀಶ್ ಶೆಟ್ಟಿ ಜೆಪ್ಪು, ಧರ್ಮದರ್ಶಿ ಹರಿಕೃಷ್ಣ ಪುನರೂರು, ಪತ್ರಿಕೆಯ ಸಂಪಾದಕರಾದ ಶಶಿ ಬಂಡಿಮಾರ್, ಸಾಹಿತಿ ಮಹೇಂದ್ರನಾಥ ಸಾಲೆತ್ತೂರು ಮುಂತಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಪ್ರಸ್ತುತ ತುಳುನಾಡ ರಕ್ಷಣಾ ವೇದಿಕೆಯ ಕೇಂದ್ರೀಯ ಮಂಡಳಿಯ ಸದಸ್ಯರಾಗಿ, ಯುವ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಹಾಗೂ ಮಂಗಳೂರು ವಿಧಾನ ಸಭಾ ಕ್ಷೇತ್ರದ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇದರೊಂದಿಗೆ ವಿವಿಧ ಪ್ರಗತಿಪರ ಸಂಘಟನೆಗಳಲ್ಲಿ ಗುರುತಿಸಿಕೊಂಡು ಯುವ ಹೋರಾಟಗಾರರಾಗಿ, ಯುವ ವಾಗ್ಮಿಯಾಗಿ ನಾಯಕತ್ವ ಗುಣವನ್ನು ಮೈಗೂಡಿಸಿಕೊಂಡು ಉದಯೋನ್ಮುಖರಾಗಿ ಬೆಳೆಯುತ್ತಿದ್ದಾರೆ. ತುಳುನಾಡಿನ ಅಭಿವೃದ್ದಿಯ ಪರ ನಡೆಸಿರುವ ಅವಿರತ ಹೋರಾಟಗಳನ್ನು ಗುರುತಿಸಿ ಇವರಿಗೆ ಪ್ರಶಸ್ತಿ ನೀಡಲಾಗಿದೆ ಎಂದು ಪತ್ರಿಕೆಯ ಮೂಲಗಳು ತಿಳಿಸಿವೆ.